ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆ ಸಚಿವರಾದ ವಿ.ಸೋಮಣ್ಣ ರವರ ಅಧ್ಯಕ್ಷತೆಯಲ್ಲಿ ನಡೆದ ರೈಲ್ವೆ ಮತ್ತು ಜಲ ಶಕ್ತಿಗೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಂಡು ವಿವಿಧ ಕಾಮಗಾರಿಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ರವರು, ಸಂಸದರಾದ ಗೋವಿಂದ ಕಾರಜೋಳ ರವರು, ಶಾಸಕರುಗಳಾದ ಕೆ ಸಿ ವೀರೇಂದ್ರ ಪಪ್ಪಿ ರವರು, ಡಾ. ಎಂ.ಚಂದ್ರಪ್ಪ ರವರು, ಜಿಲ್ಲಾಧಿಕಾರಿಗಳಾದ ವೆಂಕಟೇಶ್ ರವರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

