ಚಳ್ಳಕೆರೆ :
ದೋಣೆಹಳ್ಳಿಯ ಶ್ರೀ ಶರಣ ಬಸವೇಶ್ವರ ದಾಸೋಹ ಮಠದಲ್ಲಿ ನಡೆದ ದಾಸೋಹ ಸಂಸ್ಕೃತಿ ಉತ್ಸವದ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಪಾಲ್ಗೊಂಡು ಮಾತನಾಡಿದರು.
ಶ್ರೀ ಶರಣ ಬಸವೇಶ್ವರ ದಾಸೋಹ ಮಠ, ದೋಣೆಹಳ್ಳಿ ಇವರ ವತಿಯಿಂದ ದಾಸೋಹ ಮಠದ ಆವರಣದಲ್ಲಿ ಶ್ರೀ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ನಡೆದ ಸಮಗ್ರ ನೀರಾವರಿಗಾಗಿ ರೈತ ಸಮಾವೇಶದೊಂದಿಗೆ ದಾಸೋಹ ಸಂಸ್ಕೃತಿ ಉತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಜಗಳೂರು ಕ್ಷೇತ್ರದ ಶಾಸಕರಾದ ದೇವೇಂದ್ರಪ್ಪ, ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಎನ್.ಟಿ.ಶ್ರೀನಿವಾಸ್ ರವರು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

