ಚಳ್ಳಕೆರೆ :
ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಚಿತ್ರದುರ್ಗ ಜಿಲ್ಲೆ, ಪಿಐ ಕೆ.ಕುಮಾರ್ ನೇತೃತ್ವದಲ್ಲಿ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ, ಕೆರೆಹಿಂದಲಹಳ್ಳಿ, ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ, ಕೆರೆಹಿಂದಲಹಳ್ಳಿ ಗ್ರಾಮದ ಸಂತೋಷ್ ಕುಮಾರ್ ಹಾಗು ಇತರರು
ಗುಂಪು ಸೇರಿಕೊಂಡು ಹಣವನ್ನು ಪಣವಾಗಿ ಪಟ್ಟಿಕೊಂಡು ಕಾನೂನು ಬಾಹಿರವಾದ ಅಂದರ್ ಬಾಹರ್ ಇಸ್ಪೀಟ್ ಜೂಜಾಟವನ್ನು
ಆಡುತ್ತಿರುವುದಾಗಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಖಾಕಿ ಪಡೆ.
ಕಾನೂನು ಬಾಹಿರ ಇಸ್ಪೀಟ್ ಜೂಜಾಟ ಆಡುತ್ತಿರುವ ಆರೋಪಿತರ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.

