ಚಳ್ಳಕೆರೆ :
ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಬೆಳಗಟ್ಟ ಗ್ರಾಮದಲ್ಲಿ ನಡೆದ ಶ್ರೀ ಕರಿಬಸವೇಶ್ವರ ಅಜ್ಜಯ್ಯಸ್ವಾಮಿ ಮಹಾ ರಥೋತ್ಸವದ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.
ಇನ್ನೂ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ
ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮುಖಂಡರುಗಳಾದ ಸುಭಾಸ್ ರೆಡ್ಡಿ, ನಾರಾಯಣಪ್ಪ, ಧನಂಜಯ, ಭರಮಣ್ಣ, ಹನುಮಂತಪ್ಪ, ತಿಪ್ಪೇಸ್ವಾಮಿ, ನಾಗೇಶ್, ಅಜಯ್, ಪುನೀತ್, ಜಗದೀಶ್, ಶ್ರೀನಿವಾಸ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

