ಚಳ್ಳಕೆರೆ ನ್ಯೂಸ್ :

ಮರು ಪರಿಶೀಲಿಸಿ ಪರಿಹಾರ ವಿತರಣೆಗೆ ಕ್ರಮ: ಡಿಸಿ
ವೆಂಕಟೇಶ್

ಬೆಳೆ ಸಮೀಕ್ಷೆಯಲ್ಲಿ ಉಂಟಾದ ವ್ಯತ್ಯಾಸದಿಂದ ಚಳ್ಳಕೆರೆ ತಾಲ್ಲೂಕಿನ
ಸೋಮಗುದ್ದು, ಎನ್. ದೇವರಹಳ್ಳಿ ಗ್ರಾಮ ಪಂಚಾಯಿತಿ ಸೇರಿದಂತೆ
ಜಿಲ್ಲೆಯ ರೈತರಿಗೆ ಬೆಳೆ ವಿಮೆ ಪರಿಹಾರ ಜಮೆ ಆಗದಿರುವುದು
ಗಮನಕ್ಕೆ ಬಂದಿದೆ.

ಈ ಭಾಗದ ರೈತರ ಜಮೀನುಗಳಲ್ಲಿ ಪುನಃ
ಮರು ಪರಿಶೀಲಿಸಿ, ಬೆಳೆವಿಮೆ ಪರಿಹಾರ ವಿತರಣೆಗೆ ಅಗತ್ಯ
ಕ್ರಮಕೈಗೊಳ್ಳಲಾಗುವುದೆಂದು ಡಿಸಿ ಟಿ. ವೆಂಕಟೇಶ್ ರೈತರಿಗೆ
ಭರವಸೆ ನೀಡಿದರು.

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಳೆವಿಮೆ
ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.

Namma Challakere Local News
error: Content is protected !!