ಚಳ್ಳಕೆರೆ ನ್ಯೂಸ್ :

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಡಿ ಟಿ ಶ್ರೀನಿವಾಸ್ ರವರು ಗೆಲುವು ಸಾಧಿಸಿದ ಪ್ರಯುಕ್ತ ಕಾರ್ಯಕರ್ತರೊಂದಿಗೆ ವಿಜಯೋತ್ಸವ ಆಚರಿಸಿದರು.

ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದಲ್ಲಿ ತಮ್ಮ ಅಪಾರ ಅಭಿಮಾನಿಗಳೊಂದಿಗೆ ಪರಸ್ಪರ ಸಿಹಿ ತಿನಿಸುವ ಮೂಲಕ ಪಟಾಕಿ ಸಿಡಿಸಿ ಸಂಭ್ರಮಿಸಿದ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು

ನಮ್ಮ ಗೆಲುವು ಮತದಾರರಿಗೆ ಸಮರ್ಪಣೆ, ಕಾಂಗ್ರೆಸ್ ಪಕ್ಷದ ನಿಷ್ಠೆಯನ್ನು ಗುರುತಿಸಿ ನಮಗೆ ಆರ್ಶೀವಾದಿಸಿದ ಶಿಕ್ಷಕರಿಗೆ ಅಭಿನಂದನೆಗಳು ಎಂದರು

ಈ ಸಂದರ್ಭದಲ್ಲಿ ಕಾರ್ಯಕರ್ತರು, ಮುಖಂಡರುಗಳು ಉಪಸ್ಥಿತರಿದ್ದರು.

Namma Challakere Local News
error: Content is protected !!