ಚಳ್ಳಕೆರೆ ನ್ಯೂಸ್ :
ಆಗ್ನೆಯ ಶಿಕ್ಷಕರ ಕ್ಷೇತ್ರದ ನೂತನ ವಿಧಾನ ಪರಿಷತ್ ಸದಸ್ಯರಾಗಿ ಜಯಗಳಿಸಿ ಆಯ್ಕೆಯಾದ ಡಿ.ಟಿ.ಶ್ರೀನಿವಾಸರವರು ಪ್ರಥಮ ಬಾರಿಗೆ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ
ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್.ಲಕ್ಷ್ಮಣ, ಅಭಿನಂದಿಸಿ
ಉಪನ್ಯಾಸಕರ ಮತ್ತು ಶಿಕ್ಷಕರ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ದೊಡ್ಡಯ್ಯ,
ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಕೆ.ವಿ.ಚಂದ್ರಶೇಖರ್ ಇತರರು ಉಪಸ್ಥಿತರಿದ್ದರು.