ಚಳ್ಳಕೆರೆ ನ್ಯೂಸ್ :

ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಮಾತನಾಡಿದರು.

ಚಳ್ಳಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುಮಾರು 58 ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಉಪವಿಭಾಗಾಧಿಕಾರಿ ಗಳಾದ ಕಾರ್ತಿಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ನಗರಸಭೆ ಸದಸ್ಯರಾದ ರಮೇಶ್ ಗೌಡ, ನಗರಸಭೆ ನಾಮ ನಿರ್ದೇಶನ ಸದಸ್ಯರಾದ ನೇತಾಜಿ ಪ್ರಸನ್ನಕುಮಾರ್, ಮುಖಂಡರುಗಳಾದ ಕೃಷ್ಣಮೂರ್ತಿ, ಪ್ರಹ್ಲಾದ್, ಮುಜೀಬ್, ಒಬ್ಬಣ್ಣ, ಸೈಯದ್, ಮಂಜುನಾಥ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ವಯೋವೃದ್ಧರು, ಉಪಸ್ಥಿತರಿದ್ದರು.

Namma Challakere Local News
error: Content is protected !!