ಚಳ್ಳಕೆರೆ ನಗರದ ಬಿಇಓ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಗುರುವಾರ ಗ್ಯಾಸ್ ಸೋರಿಕೆಯಾಗಿ ಅವಘಡ ಸಂಭವಿಸಿದ್ದು ಮೂರು ಜನ ಅಡಿಗೆ ತಯಾರಕರಿಗೆ ಘಾಯಗಳಾಗಿ ಪ್ರಾಣಪಾಯದಿಂದ ಪಾರಾಗಿದ್ದರು.

ಕ್ಯಾಂಟಿನ್ ನಲ್ಲಿ ಅಡುಗೆ ತಯಾರಿಸುವಾಗ ಗ್ಯಾಸ್ ಪೈಪ್ ನಲ್ಲಿ ಸೋರಿಕೆಯಾಗಿ ಅಡುಗೆ ತಯಾರು ಮಾಡುತ್ತಿದ್ದ ಮೂರು ಜನರ ಬಟ್ಟೆಗಳಿಗೆ ಬೆಂಕಿ ಹತ್ತಿಕೊಂಡಿದ್ದು,
ಅಲ್ಲಿದ್ದವರು ಬೆಂಕಿ ನಂದಿಸಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.

ಗಾಯಳುಗಳು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮನೆಗೆ ಮರಳಿದ್ದರು ಸುದ್ದಿ ತಿಳಿದ ತಹಶೀಲ್ದಾರ್ ಎನ್.ರಘುಮೂರ್ತಿ ಇಂದು ಇಂದಿರಾ ಕ್ಯಾಂಟಿನ್ ಗೆ ಬೇಟಿ ನೀಡಿ ಪರಶೀಲನೆ ನಡೆಸಿ ನಂತರ ಗಾಯಳುಗಳನ್ನು ಮಾತನಾಡಿಸಿ ಅರೋಗ್ಯ ವಿಚಾರಿಸಿದ್ದಾರೆ.

ಸರಕಾರ ಬಡ ಕೂಲಿ ಕಾರ್ಮಿಕರಿಗೆ, ಶಾಲೆ ಮಕ್ಕಳಿಗೆ ಅನುಕೂಲವಾಗಲೆಂದು ಇಂದಿರಾ ಈ ಕ್ಯಾಂಟಿನ್ ಮಾಡಲಾಗಿದ್ದು ಇದರಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು, ತಿಂಡಿ ಹಾಗೂ ಊಟ ಸ್ವಚ್ಚವಾಗಿ ರುಚಿಯಾಗಿ ಮಾಡಿಬೇಕು, ಅಡಿಗೆ ತಯಾರು ಮಾಡುವಾಗ ಎಚ್ಚರ ವಹಿಸಬೇಕು

ಗ್ಯಾಸ್ ನಿಂದ ಅಡುಗೆ ತಯಾರು ಮಾಡುತ್ತಿರುವ ಉದ್ದೇಶದಿಂದ ಗ್ಯಾಸ್ ಬಳಕೆ ಹಾಗೂ ಅದರ ನಿರ್ವಹಣೆ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ.

ಇಲ್ಲವಾದರೆ ಕಾರ್ಮಿಕರು ತೊಂದರೆ ಅನುಭವಿಸುವಂತಾಗುತ್ತದೆ‌. ನಿನ್ನೆ ಆಗಿರುವ ಘಟನೆ ವಿಷಾದನೀಯ ಆದರೆ ಸದ್ಯ ಸಣ್ಣ ಅವಘಡದಲ್ಲೆ ಮುಗಿದಿದೆ ಇಂತಹ ಅವಘಡಗಳು ಪುನಃ ಸಂಭವಿಸದಂತೆ ಇಲ್ಲಿನ ವ್ಯವಸ್ಥಾಪಕರು ನೋಡಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದೆ ಸಂದರ್ಭದಲ್ಲಿ ಕ್ಯಾಂಟೀನ್ ನಲ್ಲಿ ತಾವೇ ಸ್ವತಃ ಬೆಳಗಿನ ಉಪಹಾರ ಸೇವಿಸಿ ಗುಣಮಟ್ಟ ಪರೀಕ್ಷೆ ಮಾಡಿದರು.

Namma Challakere Local News
error: Content is protected !!