ನಾಯಕನಹಟ್ಟಿ ;:
ಪಟ್ಟಣ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಘೊಷಣೆ ಮಾಡುವಂತೆ ಪಟ್ಟಣದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕರವೆ ಹೋಬಳಿ ಅಧ್ಯಕ್ಷ ಬಿ.ತಿಪ್ಪೇಸ್ವಾಮಿ ಮಾತನಾಡಿ ಪಟ್ಟಣ ಪಂಚಾಯಿತಿಯ ಚುನಾವಣೆ ನಡೆದು ಐದು ಆರು ತಿಂಗಳು ಕಾಲ ಕಳೆದರು. ಪಟ್ಟಣ ಪಂಚಾಯತಿ ಸ್ಥಾನಗಳಿಗೆ ಮೀಸಲಾತಿ ಘೋಷಣೆ ಮಾಡಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಮಾಡಬೇಕು.
ಪಪಂಗೆ ಅಧ್ಯಕ್ಷರು, ಉಪಾಧ್ಯಕ್ಷರು ಇಲ್ಲದೆ ಪಟ್ಟಣ ಪಂಚಾಯತಿ ವ್ಯಾಪ್ತಿಯ ಸುಮಾರು ೧೬ ವಾರ್ಡ್ಗಳ ಸಾರ್ವಜನಿಕರಿಗೆ ಯಾವುದೇ ಸರ್ಕಾರದ ಸೌಲಭ್ಯ ದೊರೆಯದ ಕಾರಣ ಸಾರ್ವಜನಿಕರು ಸೌಲಭ್ಯ ವಂಚಿತರಾಗಿದ್ದಾರೆ.

ಕೂಡಲೇ ಸರ್ಕಾರ ನಾಯಕನಹಟ್ಟಿ ಪಪಂನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಘೊಷಣೆ ಮಾಡಿ, ಅಧ್ಯಕ್ಷರು ಉಪಾಧ್ಯಕ್ಷರು ನೇಮಕ ಮಾಡಬೇಕೆಂದು ಒತ್ತಾಯ ಮಾಡಿದರು.
ಈ ವೇಳೆ ನಾಯಕನಹಟ್ಟಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಪಂ ಅಧ್ಯಕ್ಷರು, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಘೋಷಣೆ ಮಾಡುವಂತೆ ಘೋಷಣೆಗಳನ್ನು ಕೂಗುತ್ತಾ ನಾಡಕಛೇರಿಗೆ ಆಗಮಿಸಿ ಉಪತಹಶೀಲ್ದಾರ್ ಹಾಗೂ ಪಪಂ ಗೆ ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉಪಾಧ್ಯಕ್ಷ ಎನ್. ಬೋರಯ್ಯ, ನಗರ ಘಟಕ ಅಧ್ಯಕ್ಷ ಎಸ್. ಕಾಟಯ್ಯ, ಯುವ ಘಟಕದ ಅಧ್ಯಕ್ಷ ಸುರೇಶ್, ಸದಸ್ಯರಾದ ಮನೋಜ್, ಸಂಘಟನಾ ಕಾರ್ಯದರ್ಶಿ ಚಕ್ರವರ್ತಿ, ಸೋಮು, ತಿಪ್ಪೇಸ್ವಾಮಿ, ರಾಜು ಸೇರಿದಂತೆ ಮುಂತಾದ ಕರಾವೇ ಕಾರ್ಯಕರ್ತರು ಹಾಗೂ ಪ್ರೊಫೆಸರ್ ಬಿ ಗಿರೀಶ ಓಬಯ್ಯನಹಟ್ಟಿ, ಡಿ ಬಿ ಕರಿಬಸಪ್ಪ ಚೌಳ್ಳುಕೆರೆ ರಾಮಸಾಗರ ಸಿ ಎಂ ಪಾಲಯ್ಯ ಜಾಗನೂರಹಟ್ಟಿ ಮಂಜಣ್ಣ, ಸೇರಿದಂತೆ ಇನ್ನು ಮುಂತಾದವರು ಇದ್ದರು.

Namma Challakere Local News
error: Content is protected !!