ಚಳಕೆರೆ ತಾಲೂಕಿನಲ್ಲಿ ಚಳ್ಳಕೆರೆ ತಾಲೂಕಿನಲ್ಲಿ ಹಗಲು ವೇಳೆಯಲ್ಲಿ ಗ್ರಾಮಗಳಲ್ಲಿ ನಿರಂತರ ಜ್ಯೋತಿ ಉರಿಯುತ್ತಿರುವುದರಿಂದ ರೈತರ ಪಂಪ್ ಸೆಟ್ ಗಳಿಗೆ ನೀಡುವ ವಿದ್ಯುತ್ ಕಡಿತವಾಗೊಳಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆವತಿಯಿಂದ ನಗರದ ತಾಲೂಕು ಪಂಚಾಯತಿ ಮುಂದೆ ಅಡಿಗೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ಇನ್ನೂ ಬಯಲು ಸೀಮೆಯ ಚಳ್ಳಕೆರೆ ತಾಲೂಕಿನಲ್ಲಿ ವಿದ್ಯುತ್ ಕಣ್ಣಾಮುಚ್ಚಲೆ ಆಟ ಹಾಡುವುದು ಸಾಮಾನ್ಯವಾಗಿದೆ ಆದ್ದರಿಂದ ಹಗಲು ವೇಳೆಯಲ್ಲಿ ಬೀದಿ ದೀಪಗಳು ವಿದ್ಯುತ್ ಕಡಿತ ಗೊಳಿಸಿ ರೈತರ ಪಂಪ್ ಸೆಟ್ ಗಳಿಗೆ ನೀಡಿ ಎಂದು ಒತ್ತಾಯಿಸಿದರು.


