ಗೌಡಗೆರೆ ಗ್ರಾಮ ಪಂಚಾಯತಿಯಲ್ಲಿ ಅರಳಿದ ಕಮಲ
: ಪಾಪೇಶ್ ನಾಯಕ ಸಂತಸ

ಚಳ್ಳಕೆರೆ : ಗೌಡಗೆರೆ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಡೆದ ಪ್ರಯುಕ್ತ ನೂತನವಾಗಿ ಜಿಓ.ಓಬಳೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ಎಸ್‌ಟಿ ಮೋರ್ಚಾ ಕಾರ್ಯಕಾರಣಿ ಸದಸ್ಯ ಪಾಪೇಶ್ ನಾಯಕ ಹೇಳಿದ್ದಾರೆ.

ನಾಯಕನಹಟ್ಟಿ ವ್ಯಾಪ್ತಿಯ ಗೌಡಗೆರೆ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಜಿಓ ಓಬಳೇಶ್ ರವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೊದಿಜೀ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಸಚಿವ ಬಿ.ಶ್ರೀರಾಮುಲು ರವರ ಸಹಕಾರ ಮತ್ತು ಮಾರ್ಗದರ್ಶನದಂತೆ ಬಿಜೆಪಿ ಪಕ್ಷವನ್ನ ಗ್ರಾಮೀಣ ಪ್ರದೇಶದ ಯುವ ಜನರು ಅಭಿವೃದ್ಧಿ ಕಾರ್ಯಗಳನ್ನು ಒಪ್ಪಿಕೊಂಡಿದ್ದಾರೆ
ಆದ್ದರಿಂದ ನಮ್ಮ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜಿಓ.ಓಬಳೇಶ್ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ಎಸ್‌ಟಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪಾಪೇಶ್ ನಾಯಕ ಸಂಸತ ವ್ಯಕ್ತಪಡಿಸಿದರು.
ಈ ವೇಳೆ ಬಿಜೆಪಿ ಮುಖಂಡ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರ ಕೈ ಬಲಪಡಿಸಬೇಕು ನಾವೆಲ್ಲರೂ ಶ್ರಮಪಟ್ಟು ಪಕ್ಷಕ್ಕೆ ದುಡಿದರೆ ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಸಚಿವ ಬಿ ಶ್ರೀರಾಮುಲು ರವರು ನಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಪಕ್ಷದ ಮುಖಂಡರು ಕಾರ್ಯಕರ್ತರು ಸಚಿವ ಬಿ ಶ್ರೀರಾಮುಲು ರವರ ವ್ಯಕ್ತಿತ್ವವನ್ನು ಗೌರವಿಸಬೇಕು ಮುಂದಿನ ದಿನಗಳಲ್ಲಿ ನಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂದು ಬಿಜೆಪಿ ಮುಖಂಡ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು ತಿಳಿಸಿದ್ದಾರೆ.

ಇನ್ನೂ ನಾಯಕನಹಟ್ಟಿ ಮಂಡಲ ಅಧ್ಯಕ್ಷ ಈ ರಾಮರೆಡ್ಡಿ ಮಾತನಾಡಿ ನಮ್ಮ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಹಕಾರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಿ ಓಬಳೇಶ್ ಜಯಶೀಲರಾಗಿ ಆಯ್ಕೆಯಾಗಿದ್ದಾರೆ ಈ ಕ್ಷೇತ್ರದ ಶಾಸಕರು ಸಚಿವ ಬಿ.ಶ್ರೀರಾಮುಲು ರವರ ಮಾರ್ಗದರ್ಶನದಂತೆ ಸಹಕಾರ ನೀಡುತ್ತಾ ಬಂದಿದ್ದಾರೆ ಹಾಗೆ ಈ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಎಸ್‌ಟಿ ಹಾಗೂ ಎಸ್‌ಸಿ ಮೀಸಲಾತಿ ನೀಡಿದ್ದಾರೆ ಆದ್ದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ವಿಶ್ವಾಸವನ್ನು ಮಂಡಲ ಅಧ್ಯಕ್ಷರಾದ ಈ ರಾಮರೆಡ್ಡಿ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷ ಎಂವೈಟಿ ಸ್ವಾಮಿ, ಎಸ್‌ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಪಿ.ಶಿವಣ್ಣ, ಬಿಜೆಪಿ ಮುಖಂಡ ಮಲ್ಲಯ್ಯ ಮಲ್ಲೂರಹಳ್ಳಿ, ಮಂಡಲ ರೈತ ಮೋರ್ಚಾ ಅಧ್ಯಕ್ಷರಾದ ಎಚ್‌ಬಿ.ಬಾಲರಾಜ್, ಮಂಡಲ ಕಾರ್ಯದರ್ಶಿ ಎಸ್.ನಾಗರಾಜ್ ಹಿರೇಹಳ್ಳಿ, ನಗರ ಘಟಕ ಅಧ್ಯಕ್ಷರಾದ ಎನ್ ಮಹಾಂತಣ್ಣ, ಬಿಜೆಪಿ ಮುಖಂಡ ಸೋಮು ಚಿತ್ರದುರ್ಗ, ಎತ್ತಿನಹಟ್ಟಿ ದೇವರಾಜ್, ಮಂಡಲ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿ ಗಿಡ್ಡಾಪುರ ಬೋರಯ್ಯ, ಸಮಾಜಕ ಜಾಲತಾಣ ಸಂಚಾಲಕ ಡಿ ಬಿ ಮಂಜುನಾಥ್, ಬಿಜೆಪಿ ಕಚೇರಿಯ ಸಿಬ್ಬಂದಿ ತಿಪ್ಪೇಸ್ವಾಮಿ, ನೂತನವಾಗಿ ಆಯ್ಕೆಯಾದಂತಹ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜಿ ಓಬಳೇಶ್, ಉಪಾಧ್ಯಕ್ಷರಾದ ರೇವಕ್ಕ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಟಿ.ರಂಗಪ್ಪ, ಸದಸ್ಯರಾದ ಎಸ್.ವೆಂಕಟೇಶ್(ದಳಪತಿ) ಶಾಂತಮ್ಮ, ಅನ್ನಪೂರ್ಣೇಶ್ವರಿ, ತಿಪ್ಪೇಶ್, ಆರ್.ಗಿಣಿಯರ್, ಮಂಜಕ್ಕ, ಬಿ.ಮಂಜಮ್ಮ (ಡಿಜಿ), ನಾಗಣ್ಣ, ಬಿ ಸರೋಜಮ್ಮ, ಸಣ್ಣಪ್ಪ, ಎಂ ಎಚ್ ಲಕ್ಷ್ಮಣ್, ಕೆಂಗರುದ್ರಪ್ಪ, ರಾಧಮ್ಮ, ಕೆ ಎಚ್ ಮಂಜುಳಾ, ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಸಮಸ್ತ ಊರಿನ ಸಾರ್ವಜನಿಕರು ಉಪಸ್ಥಿತರಿದ್ದರು

ಪೋಟೋ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ವ್ಯಾಪ್ತಿಯ ಗೌಡಗೆರೆ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ನೂತನವಾಗಿ ಜಿಓ ಓಬಳೇಶ್ ಅಧ್ಯಕ್ಷರಾಗಿ ಆಯ್ಕೆಯಾದರು. ಬಿಜೆಪಿ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು.

Namma Challakere Local News
error: Content is protected !!