ಚಳ್ಳಕೆರೆ : ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಸ್ಥಳೀಯ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಈಡೀ ಕ್ಷೇತ್ರದ ತುಂಬೆಲ್ಲ ಭರ್ಜರಿ ರೌಂಡ್ಸ್ ಹೊಡೆಯುವುದರ ಮೂಲಕ ಶಿವನ ಆರಾಧನೆಗೆ ಸಾಕ್ಷಿಯಾಕರಿದ್ದಾರೆ.
ಅದರಂತೆ ತಾಲೂಕಿನ ನರಹರಿ ನಗರದ ಶ್ರೀ ನರಹರೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ ನಗರದ ಸೂಜಿಮಲ್ಲೇಶ್ವರ ನಗರದ ಶ್ರೀ ಸೂಜಿಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಹಾಗೇ ನಗರದ ಹಳೇನಗರದ ಶ್ರೀ ತಿರುಪತಿ ತಿಮ್ಮಪ್ಪಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು, ಚಳ್ಳಕೆರೆ ನಗರದ ವೆಂಕಟೇಶ್ವರ ನಗರ ಭಜನಾ ಮಂಡಳಿ ವತಿಯಿಂದ ವೆಂಕಟೇಶ್ವರ ನಗರದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ನಂತರ ನಗರದ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ ತಾಲೂಕಿನ ಪಗಡಲಬಂಡೆ ಗ್ರಾಮದ ಶ್ರೀ ತಿಮ್ಮಪ್ಪ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು,
ಹಾಗೇ ತಾಲೂಕಿನ ಕಾಮಸಮುದ್ರ ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಡೆದ ಶ್ರೀ ಕರಿವರ ಬೀರಲಿಂಗೇಶ್ವರ ಸ್ವಾಮಿ ಹಾಗೂ ಶಿವರಾತ್ರಿ ನಾಗೇಶ ತಾತ, ಗೌಸಿದ್ದ ತಾತ ರವರ ಮಹಾ ರಥೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈಗೇ ತಾಲೂಕಿನ ಪರಶುರಾಂಪುರ, ಸೂರನಹಳ್ಳಿ, ದೇವರಮರಿಕುಂಟೆ , ಕಾಮಸಮುದ್ರ ಗ್ರಾಮದಲ್ಲಿ ಮಹಾಶಿವರಾತ್ರಿಯಲ್ಲಿ ಭಾಗಿಯಾಗಿ ದೇವರ ಆರ್ಶಿವಾದ ಪಡೆದರು.

Namma Challakere Local News
error: Content is protected !!