ಚಳ್ಳಕೆರೆ : ಆಯಿಲ್ ಸಿಟಿಯಲ್ಲಿ 2023ರ ರಾಜಾಕೀಯ ಕಣ ಭರ್ಜರಿಯಾಗಿ ರಂಗೇರಿದೆ ಅದರಂತೆ
ಕಾಂಗ್ರೇಸ್ ಭದ್ರಾ ಕೋಟೆಯಂತಿರುವ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರವನ್ನು ಭೇಧಿಸಲು ಮೂರು ಅಭ್ಯರ್ಥಿಗಳಿಂದ ಭರ್ಜರಿಯಾಗಿ ತಾಲೀಮು ನಡೆಸುತ್ತಿದ್ದಾರೆ
ಅದರಂತೆ ಇಂದು ಬಿಜೆಪಿ ಅಭ್ಯರ್ಥಿಯಾದ ಆರ್. ಅನಿಲ್ ಕುಮಾರ್ ಅವರ ಪರ, ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ತುರುವನೂರು ಹೋಬಳಿಯ ಪ್ರಮುಖರ ಸಭೆಯಲ್ಲಿ ಭಾಗವಹಿಸಿ, ಈ ಬಾರಿ ಚಳ್ಳಕೆರೆಯಲ್ಲಿ ಬಿಜೆಪಿಯ ಕಮಲವನ್ನು ಅರಳಿಸುವಂತೆ ಮತದಾರರನ್ನು ಕೋರಿದರು.
ಕೇಂದ್ರ ಸರಕಾರದ ಪ್ರಧಾನಿ ನರೇಂದ್ರಮೋದಿ ಹಾಗೂ ರಾಜ್ಯಸರಕಾರದ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನತೆಗೆ ಉತ್ತಮಜನರ ಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಉತ್ತಮ ಆಡಳಿತ ನೀಡಿದ್ದು ಈಬಾರಿಯೂ ರಾಜ್ಯದಲ್ಲಿ ಬಿಜೆಪಿ ಸರಕಾರ ಬರುವುದು ಖಚಿತವಾಗಿರುವುದರಿಂದ ಮೇ 10 ರಂದು ನಡೆಯಲಿರುವ ವಿಧಾಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಮತ ನೀಡುವಂತೆ ಮನವಿ ಮಾಡಿಕೊಂಡರು.
ಬಿಜೆಪಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಮಾತನಾಡಿ ಅಕ್ರಮಸಕ್ರಮ ಯೋಜನೆಯಲ್ಲಿ ಉಳುಮೆ ಮಾಡುವ ರೈತರಿಗೆ ಸಾಗುವಳಿ ಹಕ್ಕು ಪತ್ರ ನೀಡಿದ್ದು ಬಿಟ್ಟರೆ ಕಾಂಗ್ರೆಸ್ ಸರಕಾರ ನೀಡಿಲ್ಲ ಆದ್ದರಿಂದ ಮತೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಗೆಲ್ಲಿಸಿದರೆ ಸಾಗುವಳಿ ಹಕ್ಕು ಪತ್ರ ನೀಡುವುದಾಗಿ ಭರವಸೆ ನೀಡಿದರು.
ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಮಾತನಾಡಿ ನಾನು ಉನ್ನತ ಹುದ್ದೆಯಲ್ಲಿ ಇನ್ನು 18 ವರ್ಷ ಅವಧಿ ಇದ್ದರೂ ಸಹ ನಾನು ಜನರ ಸೇವೆ ಮಾಡುವ ಉದ್ದೇಶದಿಂದ ನರೇಂದ್ರಮೋದಿಯವರ ಜನರ ಪರ ಯೋಜನೆಗಳು, ಪಕ್ಷಸಿದ್ದಂತವನ್ನು ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ನನ್ನ ಜನ ಪರ ಸೇವೆ ಮೆಚ್ಚಿ ಬಿಜೆಪಿ ಪಕ್ಷದಿಂದ ಟಿಕೇಟ್ ನೀಡಿದ್ದಾರೆ.
ಈ ಬಾರಿ ನನಗೆ ಗೆಲ್ಲಿಸಿ ಬಹಳದಿನಗಳಿಂದ ನೆನೆಗುದಿಗೆ ಬಿದ್ದಿರುವ ಹಕ್ಕು ಪತ್ರ, ವಸತಿ, ನಿವೇಶನ, ನಗರದ ಪ್ರತಿ ವಾರ್ಡ್ ಗಳ ರಸ್ತೆ , ಚರಂಡಿ. ಒಳಚರಂಡಿಯೋಜನೆ ಸೇರಿದಂತೆ ಹಲವು ಜನರ ಯೋಜನೆಗಳನ್ನು ಅಭೀವೃದ್ಧಿ ಪಡಿಸಲಾಗುವುದು ಎಂದು ಮಹಿಳೆಯರಿಗೆ ಮನವರಿಕೆ ಮಾಡಿದರು.
ಪ್ರದಾನಿ ನರೇಂದ್ರ ಮೋದಿ, ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಆಡಳಿತ ಡಬಲ್ ಇಂಜಿನ್ ಸರಕಾರ ಜನಮೆಚ್ಚುಗೆ ಗಳಿಸಿದ ಅವರ ಕೊಡುಗೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ದೊರೆತಿವೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಕ್ಷೇತ್ರದಲ್ಲಿ ಸ್ವಯಂ ಪ್ರೇರಿತರಾಗಿ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಿರಂದ ಬಿಜೆಪಿ ಪಕ್ಷಕ್ಕೆ ಆನೆ ಭಲ ಬಂತಾಗಿದೆ ಹತ್ತು ವರ್ಷ ಕಾಂಗ್ರೆಸ್ ಶಾಸಕರಿಗೆ ಮತ ನೀಡಿದ್ದೀರಿ ಈ ಬಾರಿ ನನಗೆ ಮತ ನೀಡುವಂತೆ ಮನವಿ ಮಾಡಿಕೊಂಡರು.
ಇದೇ ಸಂದರ್ಭದಲ್ಲಿ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಚಳ್ಳಕೆರೆ ಬಿಜೆಪಿ ಅಭ್ಯರ್ಥಿಯಾದ ಆರ್ ಅನಿಲ್ ಕುಮಾರ್, ಚಳ್ಳಕೆರೆ ಮಂಡಲದ ಅಧ್ಯಕ್ಷರಾದ ಸೂರನಹಳ್ಳಿ ಶ್ರೀನಿವಾಸ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರಾಮದಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯನವರು ಹಾಗೂ ಅನೇಕ ಮುಖಂಡರು ಕಾರ್ಯಕರ್ತರು ಉಪಸ್ಥಿತಿಯಲ್ಲಿದ್ದರು…

Namma Challakere Local News
error: Content is protected !!