ಚಳ್ಳಕೆರೆ : ಆಯಿಲ್ ಸಿಟಿಯಲ್ಲಿ ಸುಮಾರು259 ಮತಗಟ್ಟೆಗಳಲ್ಲಿ ಮುಂಜಾನೆಯಿಂದ ಬಿರುಸಿನ ಮತದಾನ ಪ್ರಕ್ರಿಯೆ ನಡೆಯುತ್ತಿದೆ.
ಅದರಂತೆ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಟಿ.ಕುಮಾರಸ್ವಾಮಿ ಮುಂಜಾನೆಯ ನಗರದ ಆದಿ ದೇವರುಗಳಿಗೆ ಪೂಜೆ ಸಲ್ಲಿಸಿ ನಂತರ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ಸರ್ವವರೂ ಸಮಾನವಾದ ಹಕ್ಕು ಇದೆ ಇದನ್ನು ನಾವು ಸಂಪೂರ್ಣವಾಗಿ ಚಲಾಯಿಸಲು ಮತದಾನ ಮಾಡಬೇಕು
ಅದ್ದರಿಂದ ಯಾರು ಕೂಡ ಮತದಾನದಿಂದ ಹಿಂದೆ ಉಳಿಯದಂತೆ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.