ಚಿತ್ರದುರ್ಗ : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು ಶರಣಸಂಸ್ಕೃತಿ ಉತ್ಸವ-2023ರ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಶ್ರೀಮಠದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಬಸವಪ್ರಭು ಸ್ವಾಮಿಗಳು, ಈ ಉತ್ಸವವು ನಾಡಿನಲ್ಲಿ ಎರಡನೇ ದಸರಾ ಎಂದೇ ಖ್ಯಾತಿ ಪಡೆದಿದೆ. ಈ ಬಾರಿ ದಿ. 21-10-23 ರಿಂದ 25-10-23ರವರೆಗೆ ಸರಳವಾಗಿ ಆಯೋಜಿಸಲಾಗಿದ್ದು, ಪ್ರತಿದಿನ ದಾಸೋಹ ನಡೆಯುತ್ತದೆ. ಮುರುಗಿ ಶಾಂತವೀರ ಸ್ವಾಮಿಗಳ ಭಾವಚಿತ್ರವನ್ನು ಇಟ್ಟು ಶೂನ್ಯಪೀಠಾರೋಹಣ ಕರ‍್ಯಕ್ರಮವನ್ನು ನೆರವೇರಿಸಲಾಗುವುದು ಎಂದರು.
ಅಕ್ಟೋಬರ್ 21ರಂದು ಬೆಳಗ್ಗೆ 10.00 ಗಂಟೆಗೆ ಬಸವತತ್ತ÷್ವ ಧ್ವಜಾರೋಹಣದೊಂದಿಗೆ ಪ್ರಾರಂಭವಾಗುವ ಉತ್ಸವದ ಕರ‍್ಯಕ್ರಮಗಳು, ಅದೇದಿನ ಬೆಳಗ್ಗೆ 11 ಗಂಟೆಗೆ ಕೃಷಿಮೇಳ, ಕೃಷಿ ಮತ್ತು ಕೈಗಾರಿಕೆ ವಸ್ತು ಪ್ರದರ್ಶನ ನಡೆಯಲಿದ್ದು, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಸಂಜೆ 6.30ಕ್ಕೆ ನಡೆಯುವ ಬಸವತತ್ತ÷್ವ ಸಮಾವೇಶದಲ್ಲಿ ಸಚಿವರಾದ ಡಿ. ಸುಧಾಕರ್, ಈಶ್ವರ ಖಂಡ್ರೆ, ಚಿತ್ರನಟ ದೊಡ್ಡಣ್ಣ, ಶಾಸಕರಾದ ಬಿ.ಜಿ. ಗೋವಿಂದಪ್ಪ, ಎನ್.ವೈ. ಗೋಪಾಲಕೃಷ್ಣ ಮುಂತಾದವರು ಭಾಗವಹಿಸುವರು.
ದಿ. 22ರಂದು ಬೆಳಗ್ಗೆ 10ಕ್ಕೆ ಮಹಿಳಾ ಕ್ರೀಡಾಕೂಟ, ಸಂಜೆ 6.30 ಗಂಟೆಗೆ ಯುವಜನ ಸಮಾವೇಶ ನಡೆಯಲಿದ್ದು, ಕೇಂದ್ರಸಚಿವ ಭಗವಂತ ಖೂಬ, ರಾಜ್ಯಸಚಿವರಾದ ಎಂ.ಬಿ.ಪಾಟೀಲ, ಬಿ. ನಾಗೇಂದ್ರ, ಶಾಸಕ ಬಿ.ವೈ. ವಿಜಯೇಂದ್ರ ಮೊದಲಾದವರು ಭಾಗವಹಿಸುವರು. ದಿ. 23ರಂದು ಸಂಜೆ 6.30 ಗಂಟೆಗೆ ನಡೆಯುವ ಮಹಿಳಾ ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯಸಚಿವೆ ಶ್ರೀಮತಿ ಲಕ್ಷಿö್ಮÃ ಹೆಬ್ಬಾಳ್ಕರ್, ಶಾಸಕಿ ಶಶಿಕಲಾ ಜೊಲ್ಲೆ ಮೊದಲಾದವರು ಭಾಗವಹಿಸುವರು.
ದಿ. 24ರಂದು ಅಪರಾಹ್ನ 4.00 ಗಂಟೆಗೆ ಮೇಲುದುರ್ಗದ ಶ್ರೀ ಮುರುಘಾಮಠದ ಆವರಣದಲ್ಲಿ ಶ್ರೀಗಳಿಗೆ ಭಕ್ತಿ ಸಮರ್ಪಣೆ ನಡೆಯಲಿದೆ. ಶ್ರೀಮಠದಲ್ಲಿ ಸಂಜೆ 6.30ಕ್ಕೆ ಮಕ್ಕಳ ಸಂಭ್ರಮ ಏರ್ಪಡಿಸಲಾಗಿದ್ದು, ಬಾಲಪ್ರತಿಭೆಗಳು ಭಾಗವಹಿಸಲಿದ್ದಾರೆ. ಕೊನೆಯ ದಿನ 25ರಂದು ಬೆಳಗ್ಗೆ 10 ಗಂಟೆಗೆ ಶೂನ್ಯಪೀಠಾರೋಹಣ, 12 ಗಂಟೆಗೆ ಶ್ರೀ ಜಗದ್ಗುರು ಜಯದೇವ ಜಂಗೀಕುಸ್ತಿ, ಸಂಜೆ 6.30ಕ್ಕೆ ಶರಣಸಂಸ್ಕೃತಿ ಉತ್ಸವ ಸಮಾರೋಪ ನಡೆಯಲಿದ್ದು, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸಂಸದ ಜಿ.ಎಂ. ಸಿz್ದೆÃಶ್ವರ, ಮಾಜಿಸಚಿವ ಹೆಚ್.ಎಂ. ರೇವಣ್ಣ ಮೊದಲಾದವರು ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.
ಉತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಶಿವಬಸವ ಸ್ವಾಮಿಗಳು, ಕಾರ್ಯಾಧ್ಯಕ್ಷ ಕೆ.ಸಿ. ನಾಗರಾಜ್, ಎಸ್.ಜೆ.ಎಂ. ವಿದ್ಯಾಪೀಠದ ಸಿಇಓ ಎಂ. ಭರತ್‌ಕುಮಾರ್, ಉಮೇಶ್ ವಕೀಲರು, ಎಸ್. ಪರಮೇಶ್ವರ್ ವೇದಿಕೆಯಲ್ಲಿದ್ದರು.

Namma Challakere Local News
error: Content is protected !!