ಚಿತ್ರದುರ್ಗ ಅ.16: ಅಕ್ಟೋಬರ್ 19 ರಿಂದ 21 ರವರೆಗೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲ್ಲೂಕುಗಳಿಗೆ ಖುದ್ದಾಗಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಹಾಗೂ ಅವಹಾಲುಗಳನ್ನು ಸ್ವೀಕರಿಸಲಿದ್ದಾರೆ.
ಅಕ್ಟೋಬರ್ 19 ಗುರುವಾರಂದು ಚಳ್ಳಕೆರೆ ಮತ್ತು ಹೊಳಲ್ಕೆರೆ ತಾಲ್ಲೂಕು ಕಚೇರಿಗಳಲ್ಲಿ, ಅಕ್ಟೋಬರ್ 20 ರಂದು ಮೊಳಕಾಲ್ಮೂರು ಮತ್ತು ಹಿರಿಯೂರು ತಾಲ್ಲೂಕು ಕಚೇರಿಗಳಲ್ಲಿ, ಅಕ್ಟೋಬರ್ 21 ರಂದು ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ, ಪ್ರತಿದಿನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ವರೆಗೆ ಲೋಕಾಯುಕ್ತ ಅಧಿಕಾರಿಗಳು ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು ಎಂದು ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ತಿಳಿಸಿದ್ದಾರೆ.

Namma Challakere Local News
error: Content is protected !!