ಚಳ್ಳಕೆರೆ : ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತನ್ನ ಜೀವನವನ್ನು ಮುಡುಪಾಗಿಟ್ಟ ದೀಮಂತೆ, ಮಹಿಳೆಯರಿಗೆ ಅಕ್ಷರದ ಬೆಳಕು ಕೊಟ್ಟು ಸ್ವಾಭಿಮಾನಿಗಳಾಗಿ ಬದುಕಲು ಕಲಿಸಿಕೊಟ್ಟ÷ ಅದ್ಬುತ ಚೇತನ ಸಾವಿತ್ರಿ ಬಾಪುಲೆಯರವರು ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ನಗರದ ವಾಲ್ಮಿಕಿ ಭವನದಲ್ಲಿ ಆಯೋಜಿಸಿದ್ದ ಸಾವಿತ್ರಿ ಬಾಪುಲೆ ಜನ್ಮ ದಿನಾಚರಣೆ ಭಾಗವಹಿಸಿ ಮಾತನಾಡಿದರು. ಸ್ವತಂತ್ರ ಪೂರ್ವದಲ್ಲಿ ಸಾವಿತ್ರಿ ಬಾಯಿಯವರು ಹಲವಾರು ಕಷ್ಟ ಮತ್ತು ಅಪಾಮಾನಗಳನ್ನು ಸಹಿಸಿಕೊಂಡು ಉತ್ತಮ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ತನ್ನ ಪತಿ ಜ್ಯೋತಿ ಬಾಪುಲೆ ರವರ ಸಹಕಾರದೊಂದಿಗೆ 18 ಪಾಠಶಾಲೆಗಳನ್ನು ತೆರೆದು ಶಿಕ್ಷಣ ಕ್ರಾಂತಿಯನ್ನುAಟು ಮಾಡಿದರು ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಧ್ಯಕ್ಷ ನಾಗೇಶ್ ಮಾತನಾಡಿ, ಶಿಕ್ಷಕರ ಬೇಡಿಕೆಗಳನ್ನು ಈಗೀನ ಸರಕಾರ ಕೊಟ್ಟ ಭರವಸೆಯಂತೆ ಈಡೇರಿಸಬೇಕು, ಇನ್ನೂ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಚತೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ನೇಮಕ ಮಾಡಲು ಸರಕಾರ ಶಿಪಾರಸ್ಸು ಮಾಡಬೇಕು ಎಂದು ಒತ್ತಾಯಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಮಾರುತೇಶ್ ಮಾತನಾಡಿ, ಸಾವಿತ್ರಿಬಾಯಿ ಪುಲೆರವರು ಸಮಾಜದಲ್ಲಿನ ಅನಿಷ್ಠ ಪದ್ಧತಿಗಳಾದ ಬಾಲ್ಯವಿವಾಹ, ಸತಿ ಸಹಗಮ ಪದ್ಧತಿ, ವಿರುದ್ಧ ಹೋರಾಟ ಮಾಡಿ ಸ್ತಿçÃಯರ ರಕ್ಷಣೆಗೆ ಶ್ರಮಿಸಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಬ್ರಿಟಿಷ್ ಸರ್ಕಾರ “ಭಾರತ ಮೊದಲ ಮಹಿಳಾ ಶಿಕ್ಷಕಿ” ಎಂಬ ಬಿರುದನ್ನು ನೀಡಿ ಗೌರವಿಸಿದರು.

ಬಿಇಓ ಕೆ.ಎಸ್.ಸುರೇಶ್ ಮಾತನಾಡಿ, ಸಾವಿತ್ರಿಬಾಯಿ ಪುಲೆರವರು ಸಮಾಜದಲ್ಲಿನ ಅನಿಷ್ಠ ಪದ್ಧತಿಗಳಾದ ಬಾಲ್ಯವಿವಾಹ, ಸತಿ ಸಹಗಮ ಪದ್ಧತಿ, ಕೇಶಮುಂಡನೆ ವಿರುದ್ಧ ಹೋರಾಟ ಮಾಡಿ ಸ್ತಿçÃಯರ ರಕ್ಷಣೆಗೆ ಶ್ರಮಿಸಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಬ್ರಿಟಿಷ್ ಸರ್ಕಾರ “ಭಾರತ ಮೊದಲ ಮಹಿಳಾ ಶಿಕ್ಷಕಿ” ಎಂಬ ಬಿರುದನ್ನು ನೀಡಿ ಗೌರವಿಸಿದರು. ಆದ್ದರಿಂದ ವಿದ್ಯಾರ್ಥಿಗಳು ಅವರ ಆದರ್ಶ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಪರಿವರ್ತನೆಗೆ ಶ್ರಮಿಸಬೇಕೆಂದು ಕಿವಿಮಾತು ತಿಳಿಸಿದರು.

ಹೇಳಿಕೆ : ಶೈಕ್ಷಣಿಕ ಇತ ದೃಷ್ಠಿಯಿಂದ ತಾಲೂಕಿನಲ್ಲಿ ಸುಮಾರ 1.ಕೋಟಿ ವೆಚ್ಚದಲ್ಲಿ ಸುಮಾರು 100 ಸರಕಾರಿ ಶಾಲೆಗಳನ್ನು ಸ್ಮಾಟ್ ಕ್ಲಾಸ್ ಮಾಡಲು ಶಿಪಾರಸ್ಸು ಮಾಡಿದೆ, ಇನ್ನೂ ಮಾರ್ಚ್ ಅಂತ್ಯದ ವೇಳೆಗೆ ಮಕ್ಕಳಿಗೆ ವರದಾನವಾಗಿದೆ ಇನ್ನೂ ನನ್ನ ಹತ್ತು ವರ್ಷದ ಅವಧಿಯಲ್ಲಿ ಸರಕಾರಿ ಶಾಲೆಗಳ ಅಭಿವೃದ್ದಿಗೆ, ಶೈಕ್ಷಣಿಕ ಕ್ಷೇತ್ರಕ್ಕೆ ಅನುದಾನ ನೀಡಿದ್ದೆನೆ. — ಶಾಸಕ ಟಿ.ರಘುಮೂರ್ತಿ

ಇದೇ ಸಂಧರ್ಭದಲ್ಲಿ ರಾಜ್ಯ ಕಾರ್ಯದರ್ಶಿ ರಾಜಶೇಖರ್ ಮಾತನಾಡಿದರು, ಈ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಮಾರುತೇಶ್, ಸಂಘದ ಪದಾಧಿಕಾರಿಗಳು ಶಿಕ್ಷಕವೃಂಧದವರು ಉಪಸ್ಥಿತರಿದ್ದರು.

Namma Challakere Local News
error: Content is protected !!