ಚಿತ್ರದುರ್ಗ : ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 3ರಂದು ಬೆಳಗ್ಗೆ 11 ಗಂಟೆಗೆ ಬಸವ ಜಯಂತಿ ಅಂಗವಾಗಿ ಸರ್ವಶರಣ, ಸಂತ ಮತ್ತು ದಾರ್ಶನಿಕರ ಸ್ಮರಣೆ ಹಾಗೂ ಹೆಸರಾಂತ ನಟ ಮತ್ತು ಸಾಂಸ್ಕೃತಿಕ ರಾಯಭಾರಿ ಡಾ. ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.
ಡಾ. ಶಿವಮೂರ್ತಿ ಮುರುಘಾ ಶರಣರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೃಷಿ ಸಚಿವ ಬಿ.ಸಿ. ಪಾಟೀಲ್, ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಹೆಸರಾಂತ ಚಲನಚಿತ್ರ ನಟರಾದ ಡಾ. ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಅವರುಗಳು ಮುಖ್ಯಅತಿಥಿಗಳಾಗಿ ಭಾಗವಹಿಸುವರು. ಹಿರಿಯ ಸಾಹಿತಿ ಡಾ. ರಾಜಪ್ಪ ದಳವಾಯಿ ಬಸವಶ್ರೀ ಪ್ರಶಸ್ತಿ ಪುರಸ್ಕೃತರ ಕುರಿತು ಮಾತನಾಡುವರು. ಜಿಲ್ಲಾಧಿಕಾರಿ ಶ್ರೀಮತಿ ಕವಿತಾ ಎಸ್. ಮನ್ನೀಕೇರಿ ಮತ್ತು ಚಿತ್ರೋದ್ಯಮಿ ಚಿನ್ನೇಗೌಡರು ಉಪಸ್ಥಿತರಿರುವರು. ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Namma Challakere Local News
error: Content is protected !!