ಚಳ್ಳಕೆರೆ : ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿದಾಗ ತಾವು ಏನನ್ನಾದರೂ ಸಾಧಿಸಬೇಕು ಎಂಬ ಛಲವನ್ನು ಇಟ್ಟುಕೊಳ್ಳಬೇಕು ಕ್ರೀಡೆಗಳಲ್ಲಿ ಸೋಲು ಗೆಲುವು ಸಹಜವಾದದ್ದು ಎಲ್ಲವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ನಗರದ ಡಿ.ಸುಧಾಕರ್ ಕ್ರೀಡಾಗಣಂದಲ್ಲಿ ಆಯೋಜಿಸಿದ್ದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಚಿತ್ರದುರ್ಗ ಶ್ರೀ ಶಾರದಾ ಮಂದಿರ ವಿದ್ಯಾಸಂಸ್ಥೆ (ರಿ), ಬಿ.ಸೀತಾರಾಮ ಶಾಸ್ತ್ರೀ ಪದವಿ ಪೂರ್ವ ಕಾಲೇಜು, ಬೆಳಗೆರೆ – ನಾರಾಯಣಪುರ ಮತ್ತು ಡಾ. ಎಸ್.ರಾಧಾಕೃಷ್ಣನ್ ಎಜ್ಯುಕೇಶನ್ ಸೊಸೈಟಿ, ಎಸ್.ಎಲ್.ಕೆ.ಹೆಚ್.ಆರ್. ಪದವಿ ಪೂರ್ವ ಕಾಲೇಜು, ನಾರಾಯಣಪುರ ಇವರ ಸಂಯುಕ್ತಾಶ್ರಯದಲ್ಲಿ ನಡೆದ 2024-25ನೇ ಸಾಲಿನ ಚಳ್ಳಕೆರೆ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕ್ರೀಡಾಕೂಟ ಯಶಸ್ವಿಯಾಗಲು ಕ್ರೀಡಾಪಡುಗಳ ಸಹಕಾರ ಮುಖ್ಯ ತಾಲೂಕು ಮಟ್ಟದ ಕ್ರೀಡಾಕೂಟ ತಾಲೂಕಿನ ಇಂತಹ ಪ್ರತಿಭೆಗಳನ್ನು ಸ್ಪೂರ್ತಿಯಾಗಿಸಿಕೊಂಡು ಇಂದು ನಡೆಯುತ್ತಿರುವ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಜಯಗಳಿಸಿ ಜಿಲ್ಲಾ ,ರಾಜ್ಯ, ಹಾಗೂ ರಾಷ್ಟ್ರಮಟ್ಟದಲ್ಲಿ ತಾಲೂಕಿಗೆ ಕೀರ್ತಿ ತರುವಂತಾಗಬೇಕು ಎಂದು ಆಶಿಸಿದರು.
ಎಲ್ಲಾ ಕ್ರೀಡೆಗಳು ಯಶಸ್ವಿಯಾಗಿ ಜರುಗಲು ಕ್ರೀಡಾಪಟುಗಳು ಹಾಗೂ ಶಾಲೆಗಳ ದೈಹಿಕ ಶಿಕ್ಷಕರು ಸಹಕರಿಸಬೇಕು ತೀರ್ಪುಗಾರರ ತೀರ್ಪನ್ನು ಒಮ್ಮತದಿಂದ ಸ್ವೀಕರಿಸಬೇಕು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಕ್ರೀಡಾಪಟುಗಳಿಗೆ ಕ್ರೀಡೆಗಳಲ್ಲಿ ಕೇವಲ ಗೆಲುವೊಂದೇ ಮಾನದಂಡವಲ್ಲ ಕ್ರೀಡೆಯಲ್ಲಿ ಭಾಗವಹಿಸುವುದು ಅತ್ಯಂತ ಪ್ರಮುಖವಾಗಿರುತ್ತದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಜೈತುಂಬಿ ಮಾಲಿಕ್ ಸಾಬ್, ಉಪಾಧ್ಯಕ್ಷೆ ಓ.ಸುಜಾತ ಪ್ರಹ್ಲಾದ್, ಸದಸ್ಯರುಗಳಾದ ರಮೇಶ್‌ಗೌಡ, ರಾಘವೇಂದ್ರ, ಉಪ ನಿರ್ದೇಶಕರಾದ ಪುಟ್ಟಸ್ವಾಮಿ, ಎಸ್.ರಾಮಕೃಷ್ಣ, ಅಶೋಕ್ ಬಾಬು, ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದೇವೇಂದ್ರಪ್ಪ, ಕಾರ್ಯದರ್ಶಿ ಗಳಾದ ಮುಸ್ತಾಪ್, ತಿಮ್ಮಯ್ಯ, ರಂಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.

Namma Challakere Local News
error: Content is protected !!