ಚಿತ್ರದುರ್ಗ: ಮೇ.27 ಶುಕ್ರವಾರದಂದು ಮೊಳಕಾಲ್ಮೂರು ತಾಲೂಕು ನೇರ‌್ಲಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್‌ ಮನ್ನಿಕೇರಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಘೋಷವಾಕ್ಯದೊಂದಿಗೆ ಜರುಗುವ ಗ್ರಾಮವಾಸ್ತವ್ಯದಲ್ಲಿ ಗ್ರಾಮದ ಬಹುದಿನಗಳ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಡಲಿದ್ದಾರೆ.

ಅಂದು ಬೆಳಿಗ್ಗೆ 10:30 ರಿಂದ ಗ್ರಾಮದಲ್ಲಿ ಇರುವ ಜಿಲ್ಲಾಧಿಕಾರಿಗಳಿಗೆ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Namma Challakere Local News
error: Content is protected !!