ಚಳ್ಳಕೆರೆ :
ಇತ್ತೀಚಿನ ದಿನಗಳಲ್ಲಿ ಕಳೆದ ಎರಡು ತಿಂಗಳಿಂದ ಚಳ್ಳಕೆರೆ ತಾಲೂಕಿನಲ್ಲಿ ಸರಣಿಗಳತನ ಹೆಚ್ಚಾಗಿ ನಡೆಯುತ್ತಿದ್ದು. ಚಳ್ಳಕೆರೆಗೆ ಬರುವ ಬ್ಯಾಂಕಿನಲ್ಲಿ ವ್ಯವಹರಿಸುವ ಜನರಲ್ಲಿ ಆತಂಕ ಉಂಟು ಮಾಡಿದೆ ಕಳೆದ ಎರಡು ತಿಂಗಳಿಂದ ವಾಸವಿ ಮಹಲ್ ಹತ್ತಿರ. ಶಾಂತಿನಗರ. ವಾಸವಿ ಕಾಲೋನಿ. ಕೆ ಎಸ್ ಆರ್ ಟಿ ಸಿ ಬಸ್ ಸ್ಟ್ಯಾಂಡು. ಸಂತೆ ಮಾರುಕಟ್ಟೆ ಸುಧಾಕರ್ ಸರ್ ಮನೆಯ ಹತ್ತಿರ ಹೀಗೆ ಹಲವಾರು ಪ್ರಕರಣಗಳಾದ ಚೈನ್ ಕಳ್ಳತನ ಮೊಬೈಲ್ ಕಳೆತನ ಬೈಕ್ ಕಳ್ಳತನ ಬ್ಯಾಂಕ್ ಇಂದ ಡ್ರಾ ಮಾಡಿ ಕೊಂಡು ಬಂದಿರುವ ಹಣ ಕಳ್ಳತನ ಮಾಡುವುದು ಒಂಟಿ ಇರುವ ಮಹಿಳೆಯ ಮನೆಗೆ ನುಗ್ಗಿ ಆಭರಣವನ್ನು ಕದ್ದು ಹೋಗಿದ್ದಾರೆ.
ಇದುವರೆಗೂ ಕಳ್ಳರ ಸುಳಿವು ಸಿಕ್ಕಿಲ್ಲ ಆದಷ್ಟು ಬೇಗ ಪೊಲೀಸ್ ಇಲಾಖೆ ಈ ಕಳ್ಳರನ್ನು ಹಿಡಿದು ಬಂಧಿಸಬೇಕು ಚಳ್ಳಕೆರೆಯ ಜನರಲ್ಲಿ ಭಯದ ವಾತಾವರಣವನ್ನು ಮುಕ್ತಗೊಳಿಸಿ ನಿರಳತೆಯನ್ನು ಉಂಟುಮಾಡಲಿ ಎಂದು ಚಳ್ಳಕೆರೆಯ ತಹಶೀಲ್ದಾರ್ ಅವರಿಗೆ ಹಾಗೆ ಪೊಲೀಸ್ ಇಲಾಖೆ ಡಿವೈಎಸ್ಪಿ ರಾಜಣ್ಣ ಸರ್ ಅವರಿಗೆ ಕರ್ನಾಟಕ ಯುವರಕ್ಷಣಾ ವೇದಿಕೆ ಪರವಾಗಿ ಮನವಿ ಸಲ್ಲಿಸಿದ್ದಾರೆ.
ಚಳ್ಳಕೆರೆ ತಾಲ್ಲೂಕು ಘಟಕದ ಕರ್ನಾಟಕ ಯುವರಕ್ಷಣಾ ವೇದಿಕೆಯ ಅಧ್ಯಕ್ಷರಾದ ಮೈಲಾರಸ್ವಾಮಿ. ತಾಲೂಕ್ ಪ್ರಧಾನ ಕಾರ್ಯದರ್ಶಿಯಾದ ಹಾಲೇಶ್ ಯಾದವ್ ಬೆಳಗೆರೆ. ನಗರ ಉಪಾಧ್ಯಕ್ಷರಾದ ಜಯಣ್ಣ. ತಾಲೂಕ ಕಾರ್ಯಧ್ಯಕ್ಷರಾದ ಶಿವಪುತ್ರ. ಕಾರ್ಯದರ್ಶಿಯಾದ ಗೌಡ ಯಾದವ್ ಉಪಸ್ಥಿತರಿದ್ದರು..

