ಜೂಜಾಟ ಬೆಟ್ಟಿಂಗ್ ಅಕ್ರಮ ಮಧ್ಯ ಮಾರಾಟ ಮಾಡಿದರೆ ನಿರ್ಧಾಕ್ಷಿಣ್ಯ ಕ್ರಮ : ಹನುಮಂತಪ್ಪ ಎಸ್ ಶಿರೇಹಳ್ಳಿ.

ನಾಯಕನಹಟ್ಟಿ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಯಲ್ಲಿ ಎನ್ ಉಪ್ಪಾರಹಟ್ಟಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ತಡೆಯುವಂತೆ ಗ್ರಾಮಸ್ಥರ ಮನವಿಯನ್ನು ಆಲಿಸಿ ಜೂಜಾಟ ಬೆಟ್ಟಿಂಗ್ ಅಕ್ರಮ ಮಧ್ಯ ಮಾರಾಟ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ತಳಕು ವೃತ್ತ ನಿರೀಕ್ಷಕ ಹನುಮಂತಪ್ಪ ಎಸ್ ಶಿರೇಹಳ್ಳಿ ಎಚ್ಚರಿಸಿದರು.

ನಂತರ ಮಾತನಾಡಿದ ಅವರು ಎನ್ ಉಪ್ಪಾರಹಟ್ಟಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ. ಗ್ರಾಮದಲ್ಲಿ ಇನ್ನು ಯಾರು ಅಕ್ರಮ ಮಧ್ಯ ಮಾರಾಟ ಮಾಡುತ್ತಾರೆ, ಎಂಬ ಮಾಹಿತಿ ನೀಡಿದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ವಾಹನಸವರು ಹೆಲ್ಮೆಟ್ ಅನ್ನು ಕಡ್ಡಾಯವಾಗಿ ಧರಿಸಿ ಹಾಗೂ ವಾಹನಗಳಿಗೆ ಇನ್ಸೂರೆನ್ಸ್ ಮಾಡಿಸಿ ಮತ್ತು ವಾಹನಸವರು ಚಾಲನಾ ಪರವಾನಿ ಪಡೆಯಬೇಕು. ಅಪ್ಪ ಅಪ್ಪ ಮಕ್ಕಳಿಗೆ ವಾಹನವನ್ನು ಚಾಲನೆಗೆ ನೀಡಬಾರದು ಎಂದು ರಸ್ತೆ ನಿಯಮಗಳ ಬಗ್ಗೆ ಅರಿವು ಮೂಡಿಸಿದರು.

ನಂತರ ಮುಖಂಡ ಎತ್ತಿನಹಟ್ಟಿ ಓಬಳೇಶ್ ಮಾತನಾಡಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಹಾವಳಿ ಹೆಚ್ಚಾಗಿದ್ದು, ಅದನ್ನು ತೊಡೆಯಬೇಕಿದೆ. ಇತ್ತೀಚಿನ ಯುವಕರು ಚಿಕ್ಕ ವಯಸ್ಸಿಗೆ ಮಧ್ಯ ವ್ಯಸನಿಗಳಾಗುತ್ತಿದ್ದಾರೆ. ಇದರಿಂದ ಗ್ರಾಮದಲ್ಲಿ ಶಾಂತಿ ನೆಮ್ಮದಿ ಹದಗಿಡುತ್ತಿವೆ, ಅಕ್ರಮ ಮಧ್ಯ ಮಾರಾಟಗಾರರು ಅವಾಚ್ಯ ಶಬ್ದಗಳನ್ನು ಬಳಸುತ್ತಾರೆ. ಅಂತವರು ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ನಾಯಕನಹಟ್ಟಿ ಪೊಲೀಸ್ ಠಾಣೆ ಪಿಎಸ್ಐ ದೇವರಾಜ್, ಎಎಸ್ಐ ತಿಪ್ಪೇಸ್ವಾಮಿ, ಹೆಡ್ ಕಾನ್ಸ್ಟೇಬಲ್ಗಳಾದ ಮಂಜುನಾಥ್ , ಈ. ಎಂ. ಭಾಷ್, ರಾಮಾಂಜಿನಿ, ಹಾಲೇಶ್, ಪೇದೆ ಹನುಮಂತ, ಮಹಿಳಾಪೇದೆ ಮಂಜಮ್ಮ, ಎನ್ ಉಪ್ಪಾರಹಟ್ಟಿ ಗ್ರಾಮದ ಮುಖಂಡರು,ಮಹಿಳೆಯರು, ಯುವಕರು ಇನ್ನೂ ಮುಂತಾದವರು ಹಾಜರಿದ್ದರು.

About The Author

Namma Challakere Local News
error: Content is protected !!