ಚಳ್ಳಕೆರೆ :
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಪೊಲೀಸ್ ಇಲಾಖೆಗೆ ಒಂದು ಬುಲೆರೋ ನಿಯೋ ವಾಹನವನ್ನು ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದರು.
ಚಿತ್ರದುರ್ಗ ನಗರದ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ 2024-25 ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ಪೊಲೀಸ್ ಇಲಾಖೆಗೆ ಒಂದು ಬುಲೆರೂ ನಿಯೋ ಸುಮಾರು 11.7 ಲಕ್ಷ ವೆಚ್ಚದ ವಾಹನವನ್ನು ಇಲಾಖೆಗೆ ನೀಡಿದ್ದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ರಂಜಿತ್ ಕುಮಾರ್ ಬಂಢಾರು, ರಿಸರ್ವ್ ಇನ್ಸ್ಪೆಕ್ಟರ್ ಪೊಲೀಸ್ ಅಧಿಕಾರಿಗಳಾದ ಶಶಿಕುಮಾರ್, ಡಿವೈಎಸ್ಪಿ ರಾಜಣ್ಣ, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

