ಚಳ್ಳಕೆರೆ : ರೈತ ಹುತಾತ್ಮರ ದಿನಾಚರಣೆ ಅಂಗವಾಗಿ ಚಳ್ಳಕೆರೆ ನಗರದ ರೋಟರಿ ಬಾಲ ಭವನ ಸಭಾಂಗಣದಲ್ಲಿ ಸೋಮವಾರ ರೈತ ಹುತಾತ್ಮ ದಿನಾಚರಣೆಯನ್ನು ಅಖಂಡ ಕರ್ನಾಟಕ ರಾಜ್ಯ ರೈತ ಸಂಘದಿಂದ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿ ನಾಗರಾಜ್ ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ..
ಇನ್ನು ಅಂದು ನಗರದ ರೋಟರಿ ಬಾಲ ಭವನದಲ್ಲಿ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವಂತಹ ರೈತ ಮುಖಂಡರುಗಳು ಹಾಗೂ ಸ್ಥಳೀಯ ಮುಖಂಡರುಗಳು ಹಾಗೂ ಪದಾಧಿಕಾರಿಗಳನ್ನು ಒಳಗೊಂಡಂತಹ ಎಲ್ಲಾ ಸಂಘಟನೆಗಳ ರೈತರಗಳ ಒಳಗೊಳ್ಳುವಳಿಕೆ ಮೂಲಕ ರೈತರ ಹುತಾತ್ಮ ದಿನಾಚರಣೆಯನ್ನು ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ವಿಶೇಷವಾಗಿ ಸರ್ಕಾರಿ ಇಂಜಿನಿಯರ್ ಕಾಲೇಜ್ ಆವರಣದಲ್ಲಿ ನೂರಾರು ತೆಂಗಿನ ಸಸ್ಯಗಳನ್ನು ನೆಡುವುದರ ಮೂಲಕ ಹುತಾತ್ಮರಿಗೆ ಗೌರವ ನಮನಗಳನ್ನು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ


