ಚಳ್ಳಕೆರೆ :
ಚಿತ್ರದುರ್ಗ: ರೈತರಿಗೆ ಶೀಘ್ರ ಭೂಮಿ ಮಂಜೂರಿಗೆ
ಆಗ್ರಹ!
ಬಗರ್ ಹುಕುಂ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ
ಶೀಘ್ರ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ವಿತರಿಸುವಂತೆ
ರೈತ ಸಂಘದ ಹುಚ್ಚವನಹಳ್ಳಿ ಮಂಜುನಾಥ್ ಮತ್ತು ಸದಸ್ಯರು
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು. ಗ್ರಾಮೀಣ
ಪ್ರದೇಶದ ಬಡ ಕುಟುಂಬಗಳಿಗೆ ನಿವೇಶನ ಮಂಜೂರು ಮಾಡಲು
ಮತ್ತು ಅರಣ್ಯ ಭೂಮಿ ಗೋಮಾಳದಲ್ಲಿ ಸಾಗುವಳಿ ಮಾಡುತ್ತಿರುವ
ರೈತರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿದರು.

