ಚಳ್ಳಕೆರೆ :
ಚಿತ್ರದುರ್ಗ: ಕಾಂಗ್ರೆಸ್ ನಿಂದ ಪ್ರಜಾ ಪ್ರಭುತ್ವದ ಕಗ್ಗೋಲೆ
ಬರುವ ಸ್ಥಳೀಯ ಚುನಾವಣೆಯಲ್ಲಿ ಇವಿಎಂ ಮಿಷನ್
ಬದಲು ಬ್ಯಾಲೆಟ್ ಬಳಕೆ ಪ್ರಜಾಪ್ರಭುತ್ವದ ಕಗ್ಗೋಲೆ ಎಂದು
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.
ಚಿತ್ರದುರ್ಗದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ
ಅವರು, ಸಚಿವ ಸಂಪುಟದಲ್ಲಿ ರಾಜ್ಯ ಸರ್ಕಾರ ಈ ನಿರ್ಣಯ
ತೆಗೆದುಕೊಂಡಿದೆ. ಅವರಿಗೆ ಇವಿಎಂ ಮೇಲೆ ನಂಬಿಕೆ ಇಲ್ಲದಂತಾಗಿದೆ.
ದೇಶದ ಜನತೆಗೆ ಇವಿಎಂ ಬಗ್ಗೆ ವಿಶ್ವಾಸ ಹೋಗಿಲ್ಲ, ಆದರೆ ದೇಶದ
ಮತದಾರರಿಗೆ ಕಾಂಗ್ರೆಸ್ ಬಗ್ಗೆ ವಿಶ್ವಾಸ ಹೋಗಿದೆ ಎಂದು ಅವರು
ಹೇಳಿದರು.

