“ಸ್ವಾಮಿ ವಿವೇಕಾನಂದರ ಚಿಂತನೆಗಳ ಅನುಸರಣೆಯಿಂದ ಸಮರ್ಥ ರಾಷ್ಟ್ರ ನಿರ್ಮಾಣ ಸಾಧ್ಯ”-ಅಭಿಷೇಕ್ ಚಕ್ರವರ್ತಿ ಅಭಿಮತ.
ಚಳ್ಳಕೆರೆ:-ಸ್ವಾಮಿ ವಿವೇಕಾನಂದರ ಚಿಂತನೆಗಳ ಅನುಸರಣೆಯಿಂದ ಸಮರ್ಥ ರಾಷ್ಟ್ರವನ್ನು ಕಟ್ಟಲು ಸಾಧ್ಯ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಶ್ರೀಅಭಿಷೇಕ್ ಚಕ್ರವರ್ತಿ ತಿಳಿಸಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಯುವಕ-ಯುವತಿಯರಿಗಾಗಿ ಆಯೋಜಿಸಿದ್ದ “ವಿಶೇಷ ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ವಿಶೇಷ ಉಪನ್ಯಾಸ ನೀಡಿದರು.
ಸ್ವಾಮಿ ವಿವೇಕಾನಂದರರು ತಿಳಿಸಿದಂತೆ ಭಾರತದ ಆತ್ಮ ಧರ್ಮ-ಆಧ್ಯಾತ್ಮವಾಗಿದ್ದು ಅದರ ಭಾಗವಾದ ವೇದ-ಉಪನಿಷತ್ತು- ಭಗವದ್ಗೀತೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಅದರಲ್ಲಿರುವ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡರೆ ವ್ಯಕ್ತಿ ನಿರ್ಮಾಣ ಸಹಜವಾಗಿಯೇ ಆಗುತ್ತದೆ, ತನ್ಮೂಲಕ ರಾಷ್ಟ್ರ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಈ ಕಾರ್ಯಕ್ರಮದ ಆರಂಭದಲ್ಲಿ ಭಜನೆಯನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರೆ ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಸಂನ್ಯಾಸಿ ಗೀತೆಯ ಗಾಯನ ನಡೆಯಿತು. ತರಗತಿಯಲ್ಲಿ ವೆಂಕಟಲಕ್ಷ್ಮಮ್ಮ, ಜಿ ಯಶೋಧಾ ಪ್ರಕಾಶ್, ಮಂಜುಳ ಉಮೇಶ್,ಕೆ.ಎಸ್ ವೀಣಾ,ಸುಕೃತಾ,ಚೇತನ್, ಸಂತೋಷ್, ಅಂಬಣ್ಣ,ಮೌರ್ಯ, ಲೋಹಿತ್ ಕುಮಾರ್, ಪುಷ್ಪಲತಾ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

