ಚಳ್ಳಕೆರೆ : ಸರಕಾರ ನಿಗಧಿ ಪಡಿಸಿದ ಅವಧಿಯೊಳಗೆ ಗಣತಿಯನ್ನು ಗಣತಿದಾರರು ಪೂರೈಸಬೇಕು ಎಂದು ಜಿಲ್ಲಾ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್ ಹೇಳಿದರು.
ಅವರು ನಗರದ ತಹಶಿಲ್ದಾರ್ ಕಛೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಜನಗಣತಿಯಲ್ಲಿ ಯಾವುದೇ ಲೋಪದೋಷ ಆಗದಂತೆ ಗಣತಿ ದಾರರು ಕುದ್ದಾಗಿ ಮನೆಗಳಿಗೆ ಬೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು ಜೊತೆಗೆ ಸರಕಾರ ನಿಗಧಿ ಪಡಿಸಿದ ಅವಧಿಯಲ್ಲಿ ಗಣತಿ ಮುಗಿಸಿ ವರದಿ ನೀಡಬೇಕು ಎಂದರು.
ಇದೇ ಸಂಧರ್ಭದಲ್ಲಿ ತಹಶಿಲ್ದಾರ್ ರೇಹಾನ್ ಪಾಷ, ಬಿಇಒ ಕೆ.ಎಸ್.ಸುರೇಶ್, ಬಿಸಿಎಂ ಅಧಿಕಾರಿ ರಮೇಶ್, ಇತರ ಶಿಕ್ಷಕರು, ಅಧಿಕಾರಿಗಳು ಭಾಗವಹಿಸಿದ್ದರು.


