ಚಳ್ಳಕೆರೆ : ನಗರದ ಹೆಚ್ ಪಿಪಿಸಿ ಪ್ರಥಮ ದರ್ಜೆ ಕಾಲೇಜು ಗೇ ದೀಡೀರ್ ಬೇಡಿ ನೀಡಿದ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಕಾಮಗಾರಿ ಪರೀಶಿಲನೆ ಮಾಡಿ ಮಾತನಾಡಿದರು.
ನಿಗಧಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಓಡಾಡಲು ತೊಂದರೆಯಾಗದಂತೆ ಕಾಮಗಾರಿ ಮಾಡುವಂತೆ ಇಂಜಿನಿಯರ್ ಸಿದ್ದೇಶ್ ಗೆ ಸೂಚನೆ ನೀಡಿದರು.
ನಗರದ ಹೆಚ್ ಪಿಪಿಎಸ್ ಸರಕಾರಿ ಪ್ರಥಮರ್ಜೆ ಕಾಜೇಜಿನ ದ್ವಿಪತ ರಸ್ತೆ ಚರಂಡಿ. ಮುಖ್ಯದ್ವಾರದ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದರು.ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಹೆಚ್.ಪಿ.ಪಿ.ಸಿ.ಕಾಲೇಜಿನ ಕಾಂಪೌಡ ಹಾಗೂ ಮುಖ್ಯ ದ್ವಾರದ ಕಾಮಗಾರಿಯನ್ನು ವೀಕ್ಷಿಸಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ನಿರ್ಮಿತಿ ಕೇಂದ್ರ ಇಂಜಿನಿಯರ್ ಸಿದ್ದೇಶ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರಾದ ವೀರೇಶ್, ತಿಪ್ಪೇಸ್ವಾಮಿ, ವೀರೇಶ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

