ಹೊಸದುರ್ಗ: ಕೆಮ್ಮಣ್ಣಿಂದ ಗುಂಡಿ ಮುಚ್ಚುತ್ತಿರುವ
ಸರ್ಕಾರ
ಹೊಸದುರ್ಗದ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು
ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದ ಕಾರಣ,
ಹೊಸದುರ್ಗದ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಮುಂದಿನ
ರಸ್ತೆ ಗುಂಡಿಗಳನ್ನು ಮುಚ್ಚಲು ಹಣವಿಲ್ಲ ಎಂದು ಅಸಮಾಧಾನ
ವ್ಯಕ್ತಪಡಿಸಿದ್ದಾರೆ. ಬುಧವಾರ ಹೊಸದುರ್ಗದಲ್ಲಿ ಮಾತನಾಡಿದ
ಅವರು, ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳಿಗೆ ಹಣವಿದೆ ಆದರೆ
ರಸ್ತೆ ಗುಂಡಿ ಮುಚ್ಚಲು ಹಣವಿಲ್ಲ ಎಂದು ವ್ಯಂಗ್ಯವಾಡಿದರು. ಈ
ಕುರಿತ ವಿಡಿಯೋ ವೈರಲ್ ಆಗಿದೆ.

