ಪ್ಲಾಸ್ಟಿಕ್ ಗ್ರೈನುಲ್ ಮೇಕಿಂಗ್ ಮೆಸ್ಸಿ ನೂತನ ಯಂತ್ರಕ್ಕೆ ಚಾಲನೆ ನೀಡಿದ ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿ ಸತ್ಯನಾರಾಯಣ ಸ್ವಾಮಿ ಇರಿಗೇಶನ್ ವತಿಯಿಂದ ಪ್ಲಾಸ್ಟಿಕ್ ಗ್ರೈನುಲ್ ಮೇಕಿಂಗ್ ಮೆಸ್ಸಿ ಯ ನೂತನ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಸತ್ಯನಾರಾಯಣ ಸ್ವಾಮಿ ಏಜೆನ್ಸಿಯ ಮುಖ್ಯಸ್ಥರಾದ ಸತ್ಯನಾರಾಯಣ, ರೈತ ಸಂಘದ ಭೂತಯ್ಯ, ಪ್ರಗತಿಪರ ರೈತ ಆರ್.ಎ.ದಯಾನಂದ ಮೂರ್ತಿ, ಅರವಿಂದ, ರಾಮಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ ಸ್ವಾಮಿ, ಕಿಸಾನ್ ಅಧ್ಯಕ್ಷರಾದ ನಾಗರಾಜ್ ಮತ್ತು ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.