ಸಾರಿಗೆ ಸಚಿವ ಶ್ರೀರಾಮುಲು ಟೂರಿಂಗ್ : ಡಿಕೆಶಿ ಆರೋಪ
ಬಯಲು ಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ಚಳ್ಳಕೆರೆ ಕ್ಷೇತ್ರದಲ್ಲಿ ಈಡೀ ರಾಜ್ಯವೇ ತಿರುಗಿ ನೋಡುವಂತ ಅಭಿವೃದ್ದಿ ಮಾಡಿದ್ದಾರೆ ಆದರೆ ಪಕ್ಕದ ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಬರೀ ಟೂರಿಂಗ್ ಮಾಡಿಕೊಂಡು ಇದ್ದಾರೆ, ಇನ್ನೂ ಜನರ ಕಷ್ಟ ಕೇಳದೆ ಇರವುದು ಅವರ ಬಿಜೆಪಿ ಪಕ್ಷದ ವೈಪಲ್ಯ ಎಂದು ಶ್ರೀರಾಮುಲು ವಿರುದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಚಾಟಿ ಬೀಸಿದರು.
ಇನ್ನೂ ಕೇವಲ 40ದಿನ ಬಿಜೆಪಿ ಸರಕಾರ ಅಧಿಕಾರ :
ಬಿಜೆಪಿ ಸರಕಾರ ಆಡಳಿತದಲ್ಲಿ ಕೇವಲ ಜನಪರ ಅಭಿವೃದ್ದಿಗಿಂತ, ಅವರ ಅಗರಣಗಳು ಸರಮಾಲೆಗಳೆ ಹೆಚ್ಚು ಪಿಎಸ್‌ಐ ಅಗರಣ, ಇಂಜಿನಿಯಾರ್ ಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಗರಣ, ಕಂಟ್ರಾಕ್ಟೆರ್ ಬಿಜೆಪಿ ಆಡಳಿತಕ್ಕೆ ರೋಸಿ ಆತ್ಮಹತ್ಮೆ ಮಾಡಿಕೊಂಡರು, ಇನ್ನೂ 40ದಿನ ಬಿಜೆಪಿ ಸರಕಾರ ತದನಂತರ ನಿಮ್ಮ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವುತ್ತದೆ ಎಂದು ಡಿಕೆ ಭರವಸೆ ನೀಡಿದರು.

Namma Challakere Local News
error: Content is protected !!