ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಈಡೀ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ಮಾಡುತ್ತಿದ್ದಾರೆ ಅದರಂತೆ ವಿಧಾನಸಭಾ ಚುನಾವಣೆಗೆ ಕೇವಲ ಇನ್ನೂ ಮೂರು ತಿಂಗಳು ಬಾಕಿ ಇರುವಾಗಲೇ ಪುಲ್ ಆಕ್ಟಿವ್ ಹಾದ ಟಿ.ರಘುಮೂರ್ತಿ ಈಗಾಗಲೇ ಮತದಾರರ ಮನಸ್ಸಲ್ಲಿ ನಿರಂತರ ಸಂರ್ಪಕ ಕಾಯ್ದುಕೊಂಡಿದ್ದಾರೆ.
ಅದರAತೆ ಕ್ಷೇತ್ರದಲ್ಲಿ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರ ಮೂಲಕ ಮಿಂಚಿನ ಸಂಚಾರ ಆರಂಭಿಸಿದ್ದಾರೆ,
ಕ್ಷೇತ್ರದ ನಿಂಗ್ಲಾರಹಟ್ಟಿ ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬಾಗಿಯಾಗಿದ ಶಾಸಕರು ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಪಕ್ಷ ತೊರೆದು ಬಂದ ಮುಖಂಡರುಗಳಿಗೆ ಆತ್ಮೀಯವಾಗಿ ಪಕ್ಷಕ್ಕೆ ಸೆರ್ಪಡೆ ಮಾಡಿಕೊಂಡರು,
ಇನ್ನೂ ಬೆಂಗಳೂರು ನಗರದ ಮೇನ್ ಪ್ಯಾಲೇಸ್‌ನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಚಿತ್ರದುರ್ಗ ನಗರದ ಕಮ್ಮಾರೆಡ್ಡಿ ಸಮುದಾಯ ಭವನದಲ್ಲಿ ನಡೆದ ಮದುವೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಧು ವರರಿಗೆ ಶುಭ ಕೋರಿದರು.
ನಂತರ ಹಿರಿಯೂರು ನಗರದ ಅನಿಲ್ ಕಂಫಟ್ ನಲ್ಲಿ ನಡೆದ ಹುಲಿಕುಂಟೆ ಗ್ರಾಮದ ಮುಖಂಡರಾದ ಕರಿಯಪ್ಪ ರವರ ಮೊಮ್ಮಗಳ ನಾಮಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನದನAತರ ಚಳ್ಳಕೆರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಇದಾದ ಬಳಿಕ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಲಾಂಛನ ಬಿಡುಗಡೆ ಮಾಡಿ ಕ್ಷೇತ್ರದ ಬಂಗಾರದೇವರಹಟ್ಟಿ, ಬಂಗಾರ ದೇವರಹಟ್ಟಿ ಗ್ರಾಮದಲ್ಲಿ ಸಾರ್ವಜನಿಕ ಕೊಂದು ಕೊರತೆಗಳ ಬಗ್ಗೆ ಸಭೆಯನ್ನು ನಡೆಸಿದರು ಈಗೇ ಈಡೀ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ಮಾಡುವ ಮೂಲಕ ಶಾಸಕ ಟಿ.ರಘುಮೂರ್ತಿ ಜನರೊಟ್ಟಿಗೆ ಈಡೀ ದಿನವೆಲ್ಲಾ ವಿವಿಧ ಕಾರ್ಯಕ್ರಮಗಳಲ್ಲಿ ಬಾಗಿಯಾಗಿದ್ದರು.

Namma Challakere Local News
error: Content is protected !!