ಚಳ್ಳಕೆರೆ : ಬಯಲು ಸೀಮೆಯಲ್ಲಿ ಸತತವಾಗಿ ಕಳೆದ ಮೂರು ಬಾರಿ ಅಧಿಕಾರದ ಗದ್ದುಗೆ ಹಿಡಿದ ಶಾಸಕ ಟಿ.ರಘುಮೂರ್ತಿ ಅಭಿವೃದ್ದಿಯ ಹರಿಕಾರರಾಗಿದ್ದಾರೆ.
ಇನ್ನೂ ಇವರಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಉಪ್ಪಾರ ಸಂಘದ ಕಾರ್ಯದರ್ಶಿ ಎಲ್‌ಐಸಿ ರಂಗಸ್ವಾಮಿ ಒತ್ತಾಯಿಸಿದ್ದಾರೆ.

ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ವಿಜ್ಞಾನ ನಗರಿ ಚಳ್ಳಕೆರೆ ಕ್ಷೇತ್ರದಲ್ಲಿ ಸತತವಾಗಿ ಮೂರು ಬಾರಿ ಗೆದ್ದು ವಿರೋಧ ಪಕ್ಷದ ನಾಯಕರು ಮೆಚ್ಚುವಂತಹ ಕೆಲಸ ಮಾಡಿದ್ದಾರೆ.
ಆದ್ದರಿಂದ ಅವರಿಗೆ ಈ ಬಾರಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ವರಿಷ್ಠರಿಗೆ ಚಳ್ಳಕೆರೆ ಉಪ್ಪಾರ ಸಂಘದಿAದ ಹಾಗೂ ಸಮಸ್ತ ಕ್ಷೇತ್ರದ ಜನತೆ ಪರವಾಗಿ ಒತ್ತಾಯ ಮಾಡುತ್ತಿದ್ದೆನೆ ಎಂದರು.

Namma Challakere Local News
error: Content is protected !!