ಚಳ್ಳಕೆರೆ : ನಗರದ ಶಾಸಕರ ಭವನದಲ್ಲಿ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜು ಅರಸು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಚಳ್ಳಕೆರೆ ಬ್ಲಾಕ್ ಕಾಂಗ್ರೇಸ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗು ನಗರಸಭೆ ಸದಸ್ಯ ಕೆ. ವೀರಭದ್ರಯ್ಯ ಮಾತನಾಡಿ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ್ ಅರಸು ರವರು ಶೋಷಿತ ಸಮುದಾಯಗಳ ಪರ ಧ್ವನಿ ಎತ್ತಿದ ದೀಮಂತ ನಾಯಕರವರು, ಜೀತ ಮುಕ್ತ ಪದ್ದತಿಯನ್ನು ನಿರ್ಮೂಲನೆ ಮಾಡಿ ಜೀತ ಮುಕ್ತ ಹರಿಕಾರರು ಎನ್ನಿಸಿಕೊಂಡವರು ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ್ ಅರಸು ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ್ ಅವರು ತಮ್ಮ ಅಧಿಕಾರ ಅವಧಿಯಲ್ಲಿ ತುಳಿತಕ್ಕೊಳಗಾದವರಿಗೆ ಧ್ವನಿ ನೀಡಿದ ವ್ಯಕ್ತಿ, ಉಳುವವನೇ ಭೂಮಿ ಒಡೆಯ ಕಾಯ್ದೆ ಜಾರಿಗೆ ತಂದವರು. ಇಂತಹ ಮಹಾನ್ ನಾಯಕರುಗಳ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರು ರೂಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆ ಅಲ್ಪ ಸಂಖ್ಯಾತರ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಪರೀದ್ ಖಾನ್, ಪುರಸಭೆ ಮಾಜಿ ಸದಸ್ಯ ಹೆಚ್.ಎಸ್. ಸೈಯದ್, ಕೃಷ್ಣಮೂರ್ತಿ, ತಾಪಂ ಮಾಜಿ ಸದಸ್ಯ ಮೂಡಲಗಿರಿಯಪ್ಪ, ಸೈಪುಲ್ಲಾ, ಸೇರಿದಂತೆ ಮುಂತಾದವರು.

Namma Challakere Local News
error: Content is protected !!