Month: September 2023

ಚಳ್ಳಕೆರೆ : ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ತಪ್ಪಿದ ಬಾರಿ ಅನಾವುತ

ಚಳ್ಳಕೆರೆ : ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ತಪ್ಪಿದ ಬಾರಿ ಅನಾವುತ ಹೌದು ಚಳ್ಳಕೆರೆ ನಗರದ ಪಾವಗಡ ರಸ್ತೆಯ ಹಳೆ ನಗರದ ತಿರುವನ್ನು ಇದ್ದ ವಿದ್ಯುತ್ ಕಂಬಕ್ಕೆ ಲಾರಿಯೊಂದು ರಾತ್ರಿವೇಳೆ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮವಾಗಿ ಕಂಬ ಅರ್ಧಕ್ಕೆ ಮುರಿದು ಬಿದ್ದು…

ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುವುದು ಶಿಕ್ಷಕರ ಹಾಗೂ ಪೋಷಕರ ಕರ್ತವ್ಯ :ಸರಸ್ವತಿ

ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುವುದು ಶಿಕ್ಷಕರ ಹಾಗೂ ಪೋಷಕರ ಕರ್ತವ್ಯ :ಸರಸ್ವತಿ ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ನಗರೀಕರಣದ ನೆಪದಲ್ಲಿ ಗಿಡ ಮರಗಳನ್ನು ಕಡಿದು ನಾಶ ಮಾಡಲಾಗುತ್ತಿದೆ ಇದರಿಂದಾಗಿ ಪರಿಸರದ ಮೇಲೆ ದುಷ್ಪರಿಣಾಮ ಬೀರಿ ಜೀವರಾಶಿಗೆ ತೊಂದರೆ ಉಂಟಾಗುತ್ತಿದೆ ಎಂದು ಸಾಯಿ…

ಚಿತ್ರದುರ್ಗ(ಕರ್ನಾಟಕ ವಾರ್ತೆ):ಬದಲಾದ ಜೀವನ ಶೈಲಿಯಲ್ಲಿ ಕ್ರೀಡೆ ಜೀವನದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಹಿರಿಯ ನಾಗರಿಕರು ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಅವರ ದೇಹ ಹಾಗೂ ಮನಸ್ಸು ಸದೃಢವಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಹೇಳಿದರು.ನಗರದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ, ರೋಟರಿ ಕ್ಲಬ್ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಿತ್ಯವೂ ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೇಹವು ಚಟುವಟಿಕೆಯಿಂದ ಇರುವುದರಿಂದ ಮನಸ್ಸಿಗೆ ಆಹ್ಲಾದ ಸಿಗಲಿದೆ. ದೇಹವು ಸುಸ್ಥಿತಿಯಲ್ಲಿರಬೇಕಾದರೆ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳು ಪ್ರಮುಖವಾಗಿರುತ್ತವೆ. ಕ್ರೀಡೆ ಸೇರಿದಂತೆ ಯಾವುದಾದರೂ ಒಂದು ಚಟುವಟಿಯಲ್ಲಿ ಸಕ್ರಿಯವಾಗಿ, ಕ್ರಿಯಾತ್ಮಕವಾಗಿ ಭಾಗವಹಿಸುವುದರಿಂದ ಏಕತಾನತೆ, ಒಂಟಿತನದಿಂದ ಹೊರಬರಬಹುದು ಎಂದರು.ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಆರ್. ರಂಗಪ್ಪರೆಡ್ಡಿ ಮಾತನಾಡಿ, ಈ ಹಿಂದೆ ಹಿರಿಯ ನಾಗರಿಕರಿಗಾಗಿ ಸರ್ಕಾರದ ವತಿಯಿಂದ ಯಾವುದೇ ಸಮಾರಂಭಗಳು ಇರುತ್ತಿರಲಿಲ್ಲ. ಇತ್ತೀಚೆಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗಾಗಿ ಬಹಳಷ್ಟು ಉತ್ತೇಜನ ನೀಡುತ್ತಿವೆ. ಆರೋಗ್ಯ ತಪಾಸಣೆ ಶಿಬಿರಗಳು, ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳುತ್ತಿರುವುದು ಸಂತಸದ ಸಂಗತಿ. ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಕ್ರೀಡೆಯಲ್ಲಿ ಆಸಕ್ತಿ ಇರಬೇಕು. ಪ್ರತಿಯೊಬ್ಬ ಹಿರಿಯ ನಾಗಕರಿಕರು ಇದರ ಸದುಪಯೋಗ ಪಡೆದುಕೊಳ್ಳುವುದರ ಜೊತೆಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ ಮಾತನಾಡಿ, ಜೀವನದಲ್ಲಿ ಪ್ರತಿಯೊಬ್ಬರಿಗೂ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳು ಅತ್ಯಮೂಲ್ಯವಾಗಿರುತ್ತವೆ. ಹಿರಿಯ ನಾಗಕರಿಕರು ಮನೆಯಲ್ಲಿ ಇದ್ದು, ಮಾನಸಿಕವಾಗಿ ಕುಗ್ಗಿರುತ್ತಾರೆ. ಆದ್ದರಿಂದ ಅವರಿಗೆ ಈ ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಈ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದರಿಂದ ದೇಹ ಹಾಗೂ ಮನಸ್ಸು ಸದೃಢವಾಗಿರುತ್ತದೆ ಎಂದರು.ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅಕ್ಟೋಬರ್ 1 ರಂದು ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತ ಎಂ. ನೆಲವಗಿ, ರೋಟರಿ ಕ್ಲಬ್ ಅಧ್ಯಕ್ಷ ವಿ.ಜಿ.ಎಸ್. ಕನಕರಾಜ್, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ನೋಡಲ್ ಅಧಿಕಾರಿ ಜಿ. ಹರಿಪ್ರಸಾದ್, ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ.ಹೆಚ್.ಜಯಣ್ಣ, ದೈಹಿಕ ಶಿಕ್ಷಣ ಶಿಕ್ಕರು, ಚಿತ್ರಕಲಾ ಹಾಗೂ ಸಂಗೀತ ಶಿಕ್ಷಕರು, ಹಿರಿಯ ನಾಗರಿಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬೆಳಗಟ್ಟ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ: ಸೆ.25ರಂದು ವಾರ್ಷಿಕ ಮಹಾಸಭೆ

ಚಿತ್ರದುರ್ಗ(ಕರ್ನಾಟಕ ವಾರ್ತೆ):ಚಿತ್ರದುರ್ಗ ತಾಲ್ಲೂಕು ಬೆಳಗಟ್ಟ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಇದೇ ಸೆಪ್ಟೆಂಬರ್ 25ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಟ್ಟ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗಟ್ಟ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ…

ಸೆ.21ರಂದು “ಪೋಕ್ಸೊ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ” ಕುರಿತು ಬಾಲ್ಯ ವಿವಾಹ ನಿಷೇದಾಧಿಕಾರಿಗಳಿಗೆ ಒಂದು ದಿನದ ಕಾರ್ಯಗಾರ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಹಿರಿಯೂರು ವಕೀಲರ ಸಂಘ…

ಸೆ.24ರಂದು ಸಾಮಾಜಿಕ ಅಧಿಕಾರಿತಾ ಶಿಬಿರ: ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮ

ಚಿತ್ರದುರ್ಗ(ಕರ್ನಾಟಕ ವಾರ್ತೆ) :ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ (ದಿವ್ಯಾಂಗಜನ್), ಕೃತಕ ಅಂಗಾಂಗ ತಯಾರಿಕಾ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಂಕೋ), ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ…

ಸೆ.23ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ) :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಚಿತ್ರದುರ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 23ರಂದು ಬೆಳಿಗ್ಗೆ 10.30 ಗಂಟೆಗೆ…

ಚಳ್ಳಕೆರೆ ನಗರಸಭೆಯಲ್ಲಿ ಬಡವರಿಗೊಂದು ನ್ಯಾಯ -ಶ್ರೀಮಂತರಿಗೊAದು ನ್ಯಾಯ..! ನಗರಸಭೆ ಅಧಿಕಾರಿಗಳ ವಿರುದ್ದ ನೊಂದ ಮಹಿಳೆಯ ಅಳಲು

ಚಳ್ಳಕೆರೆ : ಬಡವರ ಮನೆಗಳನ್ನೂ ನಗರಸಭೆ ಪೌರಾಯುಕ್ತರು ಏಕಾ ಏಕಿ ಹೊಡೆದು ಹಾಕಿರುವುದು ಸಂತ್ರಸ್ತರ ಕುಟಂಬಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಇನ್ನೂಅಳಲನ್ನು ತೋಡಿಕೊಂಡಿದ್ದಾರೆ.ಚಳ್ಳಕೆರೆ ನಗರದ ಟೆಲಿಪೋನ್ ಟವರ್ ಹಿಂಬಾಗದಲ್ಲಿ ವಸತಿ ನಿಮಿರ್ಸಿಕೊಳ್ಳಲು ಬಡ ಕುಟುಂಬವೊAದು ಸಾಲಸೂಲ ಮಾಡಿ ಸೂರು ನಿರ್ಮಿಸಿಕೊಳ್ಳಲು ತಳಪಾಯ…

ಚಳ್ಳಕೆರೆ : ಇ- ಸ್ವತ್ತು ವಿಳಂಬ ಆಕ್ರೋಶಗೊಂಡ ಸಾರ್ವಜನಿಕರು: ನಗರಸಭೆ ಪೌರಾಯುಕ್ತ ಸಿ.ಚಂದ್ರಪ್ಪಗೆ ಸಾರ್ವಜನಿಕರಿಂದ ತರಾಟೆಗೆ

ಚಳ್ಳಕೆರೆ : ಇ- ಸ್ವತ್ತು ವಿಳಂಬ ಆಕ್ರೋಶಗೊಂಡ ಸಾರ್ವಜನಿಕರು: ನಗರಸಭೆ ಪೌರಾಯುಕ್ತ ಸಿ.ಚಂದ್ರಪ್ಪಗೆ ಸಾರ್ವಜನಿಕರಿಂದ ತರಾಟೆಗೆ ಹೌದು ಚಳ್ಳಕೆರೆ ನಗರಸಭೆಯಲ್ಲಿ ಕಳೆದ ಆರು ತಿಂಗಳಿನಿAದ ಇಸ್ವತ್ತು ಖಾತೆ ವಿಳಂಬ ದೊರಣೆಗೆ ಇಂದು ನಗರಸಭೆ ಪೌರಾಯುಕ್ತ ಸಿ.ಚಂದ್ರಪ್ಪಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು. ಇನ್ನೂ…

ಗೌರ ಸಮುದ್ರ ಮಾರಮ್ಮ ದೇವಿ ದರ್ಶನ ಪಡೆದ ಶಾಸಕ ಟಿ.ರಘುಮೂರ್ತಿ ಕುಟುಂಬ- ಸರ್ವರ ಒಳಿತಿಗೆ ಪ್ರಾರ್ಥನೆ

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ.ರಘುಮೂರ್ತಿ ಅವರು ಮಧ್ಯ ಕರ್ನಾಟಕದ ಪ್ರಸಿದ್ಧ ಶಕ್ತಿ ದೇವತೆ ಗೌರ ಸಮುದ್ರದ ಮಾರಮ್ಮದೇವಿ ಜಾತ್ರಾ ಮಹೋತ್ಸವದಲ್ಲಿ ಕುಟುಂಬ ಸಮೇತ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದೆ. ತಲಾತಲಾಂತರಗಳಿಂದ ಗೌರ ಸಮುದ್ರದಲ್ಲಿ…

error: Content is protected !!