ಚಳ್ಳಕೆರೆ :
ಚಿತ್ರದುರ್ಗದಲ್ಲಿ ಮಳೆಗೆ ಕೊಚ್ಚಿ ಹೋದ ಈರುಳ್ಳಿ ಬೆಳೆ:
ರೈತರಿಗೆ ಆರ್ಥಿಕ ಸಂಕಷ್ಟ
ಚಿತ್ರದುರ್ಗ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ
ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಪಾರ ಪ್ರಮಾಣದ
ಈರುಳ್ಳಿ ಬೆಳೆ ಕೊಚ್ಚಿ ಹೋಗಿದೆ.
ಮೇ ತಿಂಗಳಲ್ಲಿ ಉತ್ತಮ ಮಳೆಯ
ನಿರೀಕ್ಷೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಈರುಳ್ಳಿ ಬಿತ್ತನೆ ಮಾಡಿದ್ದ
ರೈತರು, ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದರು. ಆದರೆ, ಅಕಾಲಿಕ
ಮಳೆಯಿಂದಾಗಿ ಬೆಳೆ ಸಂಪೂರ್ಣ ನಾಶವಾಗಿ, ರೈತರು ಆರ್ಥಿಕ
ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರೈತ ಮುಖಂಡ ಧನಂಜಯಪ್ಪ
ಇಂದು ತಿಳಿಸಿದ್ದಾರೆ.

