ಚಿತ್ರದುರ್ಗ: ಗಂಡ ಹೆಂಡಿರ ಜಗಳದಲ್ಲಿ ಕೂಸು
ಬಡವಾಯ್ತು
ಬಿಜೆಪಿ ಮುಖಂಡ ಶ್ರೀರಾಮುಲು ಅವರು ಸಿಎಂ ಸಿದ್ದರಾಮಯ್ಯ
ಮತ್ತು ಡಿಕೆ ಶಿವಕುಮಾರ್ ಅವರ ಬಣಗಳ ನಡುವಿನ
ಜಗಳದಲ್ಲಿ ಜನರ ಕಥೆ ‘ಗಂಡ ಹೆಂಡಿರ ನಡುವಿನ ಜಗಳದಲ್ಲಿ
ಕೂಸು ಬಡವಾಯ್ತು’ ಎಂಬಂತಾಗಿದೆ ಎಂದು ಹೇಳಿದ್ದಾರೆ.
ಚಿತ್ರದುರ್ಗದಲ್ಲಿಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ
ಅವರು, ರಾಜ್ಯ ಹಾಗೂ ಚಿತ್ರದುರ್ಗ ಜಿಲ್ಲೆಗೆ ಸಚಿವ ಸುಧಾಕರ್
ಯಾವುದೇ ಹೊಸ ಯೋಜನೆಯನ್ನು ಘೋಷಿಸಿಲ್ಲ. ಕೆಲ ಶಾಸಕರು
ಸಿದ್ದರಾಮಯ್ಯ ಪರ ಹಾಗು ಇನ್ನೂ ಕೆಲವರು ಡಿಕೆ ಶಿವಕುಮಾರ್
ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂದರು.

