ಚಳ್ಳಕೆರೆ : ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಚಳ್ಳಕೆರೆ ತಾಲ್ಲೂಕು ಮುಖ್ಯ ಶಿಕ್ಷಕರ ಸಭೆಯಲ್ಲಿ ಪಾಲ್ಗೊಂಡು ಶಾಸಕ ಟಿ.ರಘುಮೂರ್ತಿ ಮಾತನಾಡಿದ್ದರು.
ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಚಳ್ಳಕೆರೆ ತಾಲ್ಲೂಕಿನ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ತಾಲ್ಲೂಕಿನ ಎಲ್ಲಾ ಪ್ರೌಢ ಶಾಲೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು.
ಪ್ರಸ್ತುತ ಸಾಲಿನ ಶಿಕ್ಷಣದ ಗುಣಮಟ್ಟ ಹೆಚ್ಚಬೇಕು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿದರು .
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣದ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್.ಸುರೇಶ್ , ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಹೆಚ್.ಶಶಿಧರ್, ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಮುಖ್ಯ ಶಿಕ್ಷಕರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


