ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಸಾರ್ವಜನಿಕ ಉದ್ಯಮಗಳ ಸಮಿತಿಯ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಬೆಂಗಳೂರು ನಗರದ ವಿಕಾಸಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 317ರಲ್ಲಿ ನಡೆದ 2025-2 6 ನೇ ಸಾಲಿನ ಕರ್ನಾಟಕ ವಿಧಾನಮಂಡಲ ಸಾರ್ವಜನಿಕ ಉದ್ಯಮಗಳ ಸಮಿತಿಯ ಪ್ರಾರಂಭಿಕ ಸಭೆಯಲ್ಲಿ ಪಾಲ್ಗೊಂಡು ಉದ್ಯಮಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಗಳಾದ ಡಾ. ವಿಶಾಲ ಐ.ಎ.ಎಸ್. , ಶಾಸಕರು ಹಾಗೂ ಸದಸ್ಯರಾದ ಶಾಂತನಗೌಡ, ವಿಧಾನಪರಿಷತ್ ಸದಸ್ಯರು ಹಾಗೂ ಸಮಿತಿ ಸದಸ್ಯರಾದ ಗೋವಿಂದರಾಜು, ಮತ್ತು ಇತರ ಎಫ್‌.ಡಿ. ಅಧಿಕಾರಿಗಳು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಸಮಿತಿ ಸದಸ್ಯರುಗಳು, ಅಧ್ಯಕ್ಷರ ಆಪ್ತ ಸಹಾಯಕ ಸೈಯದ್ ಇಸಾಕ್, ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!