ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜೆ ಆರ್ ರವಿಕುಮಾರ್, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಅವಿರೋಧ ಆಯ್ಕೆ.
ನಾಯಕನಹಟ್ಟಿ: ಪಟ್ಟಣದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆ ಆರ್ ರವಿಕುಮಾರ್ ಅಧ್ಯಕ್ಷರಾಗಿ, ಕೃಷ್ಣಪ್ಪ ಉಪಾಧ್ಯಕ್ಷರಾಗಿ ವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಎಂ ಶಶಿಧರ್ ಘೋಷಣೆ ಮಾಡಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾದ ಜೆ ಆರ್ ರವಿಕುಮಾರ್ ಮಾತನಾಡಿ ಸರ್ವ ಸದಸ್ಯರುಗಳು ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷರಾಗಿ ಆಯ್ಕೆ ಮಾಡಿರುತ್ತಾರೆ ಅವರಿಗೆ ಅನಂತ ಅನಂತ ಧನ್ಯವಾದಗಳು. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ನಾಯಕನಹಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ರೈತರಿಗೆ ದೊರೆಯುವಂತೆ ಶ್ರಮಿಸುವುದಾಗಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘವನ್ನು ಅಭಿವೃದ್ಧಿ ಪತದತ್ತ ಕೊಂಡೊಯ್ಯದಾಗಿ ಹೇಳಿದರು.
ಈ ಸಂದರ್ಭದಲ್ಲಿ ಉಪಸಿತರಾದ ಮುಖಂಡರಾದ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ( ಎತ್ತಿನಹಟ್ಟಿ ಗೌಡ್ರು ), ಶ್ರೀಕಾಂತ್, ವಕೀಲರಾದ ಉಮಾಪತಿ, ಮಾರುತಿ, ಧನಂಜಯ್, ಸಮಸ್ತ ಹೋಬಳಿಯ ರೈತರು, ಊರಿನ ನಾಗರಿಕರು ಇನ್ನು ಮುಂತಾದವರು ಹಾಜರಿದ್ದರು.

