ಚಿತ್ರದುರ್ಗ: ಬಿಸಿಯೂಟ ತಯಾರಿಕರಿಗೆ ಕನಿಷ್ಠ ವೇತನ
ಕೊಡಿ
ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ನೀಡದ ರಾಜ್ಯ
ಸರ್ಕಾರದ ವಿರುದ್ಧ ಎಐಟಿಯುಸಿ ವತಿಯಿಂದ ಸೋಮವಾರ
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಈ
ವೇಳೆ, ಬಿಸಿಯೂಟ ತಯಾರಕರು ಮುಖ್ಯಮಂತ್ರಿ ಸಿದ್ದರಾಮಯ್ಯ
ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ
ಸಲ್ಲಿಸಿದರು. ಜದಾವಣಗೆರೆ ರಸ್ತೆಯ ಕಮ್ಯುನಿಸ್ಟ ಕಚೇರಿಯಿಂದ
ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ
ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

