ಚಳ್ಳಕೆರೆ :
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ನೀರುಗಂಟಿ ಮಂಜುನಾಥ್ 25 ವರ್ಷ ಮೃತ ಪಟ್ಟಿದ್ದಾನೆ.
ಇವರಿಗೆ ಪತ್ನಿ ಹಾಗೂ ಮೂರು ಮಕ್ಕಳು ಇದ್ದಾರೆ ಎಂದು ತಿಳಿದು ಬಂದಿದೆ..
ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದಾವಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ.
ಇನ್ನೂ ತಳಕು ಪೊಲೀಸ್ ರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.

