ಚಳ್ಳಕೆರೆ :
ಚಳ್ಳಕೆರೆ ನಗರದ ಶ್ರೀ ಸಾಯಿ ಬಾಬಾ ಮಂದಿರದಲ್ಲಿ ನಡೆದ ತಾಲ್ಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮದಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ನಾಯಕನಹಟ್ಟಿ, ಚಳ್ಳಕೆರೆ ಇವರ ವತಿಯಿಂದ ಚಳ್ಳಕೆರೆ ನಗರದ ಶ್ರೀ ಸಾಯಿ ಬಾಬಾ ಮಂದಿರದಲ್ಲಿ ಮಹಿಳಾ ಜ್ಜಾನವಿಕಾಸ ಕಾರ್ಯಕ್ರಮದಡಿ ನಡೆದ ತಾಲ್ಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಬನಶ್ರೀ ವೃದ್ಧಾಶ್ರಮದ ಮುಖ್ಯಸ್ಥರಾದ ಮಂಜುಳ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕರಾದ ಗೀತಾ, ಚಳ್ಳಕೆರೆ ಕುಮಾರಿ ಪ್ರಿಯಾ, ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ದಾವಣಗೆರೆ,ಶಿವಮೊಗ್ಗ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಬಿಸಿ ಸಂಜೀವಮೂರ್ತಿ, ನಗರಸಭೆ ಮಾಜಿ ಸದಸ್ಯರಾದ ರಮೇಶ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಳಾದ ವೀರೇಶ್, ಮುಖಂಡರಾದ ನೇತಾಜಿ ಪ್ರಸನ್ನಕುಮಾರ್, ಜಗದೀಶ್, ನಾಗರಾಜ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

